ವಿದ್ಯುತ್ ಶಾಕ್ನಿಂದ ಒಂದೇ ಕುಟುಂಬದ ಮೂವರು ಸಾವು! | JANATA NEWS
ಬೆಳಗಾವಿ : ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಶಾಹುನಗರದಲ್ಲಿ ನಡೆದಿದೆ.
ಈರಪ್ಪ ರಾಠೋಡ್, ಶಾಂತವ್ವ ರಾಠೋಡ್, 9 ವರ್ಷದ ಅನ್ನಪೂರ್ಣ ರಾಠೋಡ್ ಮೃತ ದುರ್ದೈವಿಗಳು. ಮೃತರು ಮೂತಃ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದವರಾಗಿದ್ದಾರೆ.
ಬೆಳಗಾವಿಯ ಶಾಹುನಗರ 7ನೇ ಕ್ರಾಸ್ನ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿದ ವೇಳೆ ಮೊಮ್ಮಗಳಿಗೆ ವಿದ್ಯುತ್ ತಗುಲಿದ್ದು, ಮೊಮ್ಮಗಳನ್ನು ಕಾಪಾಡುವ ಸಲುವಾಗಿ ಅಜ್ಜ, ಅಜ್ಜಿ ಹೋಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಸ್ಪರ್ಶವಾಗಿದ್ದು, ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭೇಟಿ ನೀಡಿ, ಕುಟುಂಬಸ್ಥರಿಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ ಹೇಳಿದರು, ಮೃತರ ಕುಟುಂಬಕ್ಕೆ ಪರಿಹಾರ ಕೊಡಿಸೋದಾಗಿ ಭರವಸೆ ನೀಡಿದ್ದಾರೆ.