ರಾತ್ರಿ ನಾಪತ್ತೆಯಾದ ಯುವತಿ ಮುಂಜಾನೆ ಶವವಾಗಿ ಪತ್ತೆ! | JANATA NEWS
ಬೆಂಗಳೂರು : ರಾತ್ರಿ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮುಂಜಾನೆ ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಮಹೇಶ್ವರಿ ನಗರ ನಿವಾಸಿ ಮಹಾನಂದಾ (21) ಮೃತಪಟ್ಟ ಯುವತಿಯಾಗಿದ್ದಾರೆ. ಯುವತಿಯ ಮೃತದೇಹ ಆಕೆ ವಾಸವಿದ್ದ ಮನೆಯ ಮುಂದೆಯೇ ಪತ್ತೆಯಾಗಿತ್ತು. ಮಹಾನಂದಾಳ ಅಕ್ಕ ಬೆಳಗ್ಗೆ ಎದ್ದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು, ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮಹಾನಂದಾ ನಾಪತ್ತೆಯಾದ್ದಳು. ಈ ಸಂಬಂಧ ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪಕ್ಕದ ಮನೆಯಲ್ಲಿ ವಾಸ ಮಾಡುತ್ತಿದ್ದ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಕೊಲೆಯಾಗಿದೆ ಎಂಬುದು ಬಯಲಾಗಿದೆ.
ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ನಗರದ ಟೆಕ್ ಪಾರ್ಕ್ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಅಡುಗೆ ಮನೆಯಲ್ಲಿ ಅನ್ನ ಮಾಡಲು ಪಾತ್ರೆ ಇಟ್ಟಿದ್ದ ಯುವತಿ ಮನೆಯಿಂದ ಹೊರಗೆ ಬಂದಿದ್ದಾಳೆ. ಈ ವೇಳೆ ಕೃಷ್ಣ ಚಂದ್ನ ಮನೆಯ ಬಾಗಿಲಿನ ಬಳಿ ಯುವತಿ ಬಂದಾಗ ಅರೋಪಿಯು ಆಕೆಯನ್ನು ಒಳಗಡೆ ಎಳೆದುಕೊಂಡಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಬಲವಂತವಾಗಿ ಚುಂಬಿಸಲು ಮುಂದಾಗಿದ್ದಾನೆ, ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.
ಅದಕ್ಕೆ ನಿರಾಕರಿಸಿ, ಮಹಾನಂದಾ ಕಿರುಚಾಡಲು ಯತ್ನಿಸಿದ್ದಾಳೆ. ಇದರಿಂದ ಎಲ್ಲರಿಗೂ ಗೊತ್ತಾಗಿ ಬಿಡುತ್ತದೆ ಎಂದು ಹೆದರಿದ ಆರೋಪಿ, ಮಹಾನಂದಾಳನ್ನು ಹಿಂಬದಿಯಿಂದ ತಬ್ಬಿ, ಆಕೆಯ ಮೂಗು ಮತ್ತು ಬಾಯಿಯನ್ನು ಒಂದು ಕೈನಲ್ಲಿ ಮುಚ್ಚಿ, ಮತ್ತೊಂದು ಕೈನಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದಾ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.
ಕೊಲೆ ಬಳಿಕ ಬೆಡ್ಶೀಟ್ನಲ್ಲಿ ಮಹಾನಂದಾಳ ಮೃತದೇಹವನ್ನು ಸುತ್ತಿ, ಮನೆಯ ಮೂಲೆಯೊಂದರಲ್ಲಿ ಇಟ್ಟಿದ್ದ. ಹನ್ನೆರಡು ಗಂಟೆ ಸುಮಾರಿಗೆ ಆರೋಪಿಯ ಪತ್ನಿ ಮನೆಗೆ ಬಂದಿದ್ದಾರೆ. ತಾನೂ ಏನು ಮಾಡೇ ಇಲ್ಲ ಎನ್ನುವಂತೆ ನಟಿಸಿದ ಆರೋಪಿ, ಬೆಳಗಿನ ಜಾವ ಮನೆಯೊಳಗಿದ್ದ ಶವವನ್ನು ತಂದು ಮೃತಳ ಮನೆ ಮುಂದೆ ಹಾಕಿದ್ದಾನೆ.
ತನಿಖೆಯಲ್ಲಿ ಆರೋಪಿ ಕೃಷ್ಣ ಸಿಕ್ಕಿಬಿದ್ದಿದ್ದು, ಆತನನ್ನ ಬಂಧಿಸಿರುವ ಮಹದೇವಪುರ ಠಾಣಾ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.