ಸಹಕಾರ ಕ್ಷೇತ್ರದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ಗುರು ಡಿಕೆಶಿ ಕಾರಣ: ಎಸ್ಟಿ ಸೋಮಶೇಖರ್ | JANATA NEWS
ಬೆಂಗಳೂರು : ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ನನ್ನ ಗುರುಗಳಾದ ಡಿ.ಕೆ.ಶಿವಕುಮಾರ್ ಕಾರಣ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೊಗಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಡಪ್ರಭು ಕೆಂಪೇಗೌಡ ಲೇಔಟ್ ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕು ಅಂತ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದವರು ಡಿ.ಕೆ.ಶಿವಕುಮಾರ್. ಅವರ ಶ್ರಮದಿಂದ ನಾನು ಇವತ್ತು ಇಂತಹ ವೇದಿಕೆ ಮೇಲೆ ನಿಂತು ಮಾತನಾಡಲು ಕಾರಣವಾಗಿದೆ ಎಂದರು.
ನಾನು ಈ ಮಟ್ಟಕ್ಕೆ ಬೆಳೆಯಲು ನೂರಕ್ಕೆ 100 ಕಾರಣ ಡಿ.ಕೆ.ಶಿವಕುಮಾರ್ ಎಂದ ಸೋಮಶೇಖರ್, ನಿಮ್ಮಲ್ಲಿ ಒಳಗೊಂದು ಹೊರಗೊಂದು ಇಲ್ಲ. ನಿಮ್ಮಲ್ಲಿ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ನೀವು ಕೆಲಸ ಮಾಡುತ್ತಾ ಇದ್ದೀರಿ ಎಂದು ಶಿವಕುಮಾರ್ ಅವರನ್ನು ಕೊಂಡಾಡಿದರು.