Sun,Apr28,2024
ಕನ್ನಡ / English

ಕಾಂಗ್ರೆಸ್ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ | JANATA NEWS

22 Aug 2023
2402

ಬೆಂಗಳೂರು : ಕಾಂಗ್ರೆಸ್ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ.

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ವಿಚಾರವಾಗಿ ತಿರುಗೇಟು ನೀಡಿದ ಕುಮಾರಸ್ವಾಮಿ ಅವರು, ನನ್ನ ಪಕ್ಷದ ಶಾಸಕರು ನನ್ನ ತಿಳುವಳಿಕೆ ಇರುವ ರೀತಿಯಲ್ಲಿ ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ, ಕಾಂಗ್ರೆಸ್​​ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಬಿಜೆಪಿ, ಜೆಡಿಎಸ್​​​ನಿಂದ ಬರ್ತಾ ಇದ್ದಾರೆ ಅಂತ ಹೇಳ್ತಾ ಇದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನ ತಡೆಯಲು ಈ ಗುಮ್ಮ ಬಿಟ್ಟು ಕೊಂಡ ಹೋಗುತ್ತಿದ್ದಾರೆ ಎಂದು ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕುಮಾರಸ್ವಾಮಿ ಟ್ವೀಟ್ ವಿಚಾರ ಇಟ್ಟುಕೊಂಡು ಮಾತನಾಡಿದ್ದ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಟ್ವೀಟ್‌ನಲ್ಲಿ ನೀರು ಬಿಡಿ ಅಂತ ಹೇಳಿಲ್ಲ. ನನ್ನ ಟ್ವೀಟ್‌ನಲ್ಲಿ ಅಣ್ಣ-ತಮ್ಮಂದಿರ ರೀತಿ ಇರಬೇಕು ಅಂತ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಇದಕ್ಕೆ ಪರಿಹಾರ ಸಿಗಲ್ಲ. ಹೀಗಾಗಿ ಕೊಟ್ಟು ತೆಗೆದುಕೊಳ್ಳಬೇಕು ಎಂದು ಹೇಳಿದ್ದೇನೆ. ತಮಿಳುನಾಡು ರೈತರಿಗೆ ನಮ್ಮ ರೈತರು ಅನ್ಯಾಯ ಮಾಡಿಲ್ಲ. ನಮ್ಮ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ಹೇಳಿದ್ದೇನೆ. ಇದನ್ನು ಹೇಳಿದ್ದು ತಪ್ಪಾ? ನಾನು ನೀರು ಬಿಡುತ್ತೇನೆ ಎಂದು ಹೇಳಿರಲಿಲ್ಲ ಎಂದು ತಿರುಗೇಟು ನೀಡಿದರು.

ಸುಳ್ಳು ಹೇಳಿಕೊಂಡು ಎಷ್ಟು ದಿನ ರಾಜಕೀಯ ಮಾಡುತ್ತಿರಾ? ಉಡಾಫೆ ರಾಜಕೀಯ ಮಾಡಬೇಡಿ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದೀರಾ. ಮಾತ್ತೆತ್ತಿದರೆ ಪೆನ್ನು ಕೊಡಿ ಪೆನ್ನು ಕೊಡಿ ಎಂದು ಕೇಳುತ್ತಿದ್ದರು. ನಮ್ಮ ರಾಜ್ಯ ಹಾಳು ಮಾಡಲು ಪೆನ್ನು ಕೇಳಿದ್ರಾ? ನಮ್ಮ ರೈತರನ್ನು ಕಡೆಗಣಿಸಿ ಬೇರೆ ಯಾರನ್ನೋ ಮೆಚ್ಚಿಸೋಕೆ ಪೆನ್ನು ಕೇಳಿದ್ರಾ? ಹುಡುಗಾಟ ಆಡಬೇಡಿ. ಉತ್ತರ ಕೊಡುವಾಗ ನೀರಾವರಿ ಸಚಿವರ ಸ್ಥಾನ ಗಾಂಭೀರ್ಯತೆಯನ್ನು ಕಾಪಾಡಿಕೊಳ್ಳಿ. ಬಿಚ್ಚೋದು ಬಿಚ್ಚೋದು ಎಂದು ಮಾತನಾಡಬೇಡಿ. ನೀವು ಮಾಡಿರುವ ಅವ್ಯವಹಾರಗಳು ಸಾಕಷ್ಟು ಇವೆ. ಜಗಜ್ಜಾಹೀರಾಗಿವೆ. ಹಿಂದೆ ಏನೋ ಮಾಡಿಕೊಂಡು ಆಯ್ತು. ಈಗಲಾದರೂ ಗೌರವಯುತವಾಗಿ ಕೆಲಸ ಮಾಡಿ ಎಂದು ಹರಿಹಾಯ್ದರು.

ಹಿಂದೆ ಮಾಡಿಕೊಂಡಿದ್ದು ಸಾಕು. ಇನ್ನಾದರು ಲೂಟಿ ಹೊಡೆಯವುದು ನಿಲ್ಲಿಸಿ. ಅಣ್ಣ ಅಂತಿರಲ್ಲ, ಇಲ್ಲಿಯವರೆಗೆ ಲೂಟಿ ಮಾಡಿರುವುದು ಸಾಕು. ನನ್ನ ಮಾತನ್ನ ಕೇಳಿ ಲೂಟಿ ಹೊಡೆಯೊದನ್ನ ನಿಲ್ಲಿಸಿ. ಸಲಹೆ ಒಪ್ಪಿಕೊಂಡ್ರೆ ಆಗ ತಮ್ಮ ಅಂತ ಒಪ್ಪಿಕೊಳ್ಳುತ್ತೇನೆ ಎಂದರು.

RELATED TOPICS:
English summary :30 Congress MLAs have decided to leave the party

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...