ಚೆಫ್ ಟಾಕ್ ಎಂಬ ಕಂಪನಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್ಗೆ ಆಹಾರ ಪೂರೈಕೆ, ಚೈತ್ರಾ ಕುಂದಾಪುರ ಸ್ಪೋಟಕದ ಹೇಳಿಕೆ | JANATA NEWS
ಬೆಂಗಳೂರು : 2017ರಿಂದಲೇ ಚೆಫ್ ಟಾಕ್ ಎಂಬ ಕಂಪನಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್ಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಾಗಾಗಿ ಚೈತ್ರಾ ಕುಂದಾಪುರ ಹೇಳಿಕೆ ಸಂಚಲನ ಸೃಷ್ಟಿಸಿದೆ.
ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ 5 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತೆಯಾಗಿರುವ ಚೈತ್ರಾ ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದಿಂದ ಇಂದು ಸಿಸಿಬಿ ಕಚೇರಿಗೆ ಕರೆದುಕೊಂಡು ಬರುವಾಗ, ಸ್ವಾಮೀಜಿ ಬಂಧನ ಬಳಿಕ ದೊಡ್ಡವರ ಹೆಸರು ಕೂಡ ಬಹಿರಂಗವಾಗಲಿದೆ.
ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ. ಅದಕ್ಕಾಗಿಯೇ ಈ ತರ ಷಡ್ಯಂತ್ರ ರೂಪಿಸಿದ್ದಾರೆ ಎಂದು ಪರೋಕ್ಷವಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧ ಕಿಡಿಕಾರಿದ್ದಾರೆ. ಇದು ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ.
ಈ ಐದು ಕೋಟಿ ರೂಪಾಯಿ ವಂಚನೆಗೂ ಮತ್ತು ಇಂದಿರಾ ಕ್ಯಾಂಟೀನ್ ಬಿಲ್ಗೂ ಏನು ಸಂಬಂಧ ಎಂಬುವುದು ತನಿಖೆಯಲ್ಲಿ ತಿಳಿದು ಬರಬೇಕಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಂಬಂಧ ಐದು ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಿರುವ ಪೂಜಾರಿ ಅವರು ಒಟ್ಟು ಎಂಟು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಪೂಜಾರಿಯವರು ಕಂತುಗಳಲ್ಲಿ ಹಣ ಪಾವತಿಸಿದ್ದು, ಅದರಲ್ಲಿ ಒಂದನ್ನು ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಚೈತ್ರಾ ಕುಂದಾಪುರ ಅವರು ದೂರುದಾರರನ್ನು ಮಠಕ್ಕೆ ಕರೆದೊಯ್ದು ಶ್ರೀಗಳಿಗೆ ಪರಿಚಯಿಸಿದರು ಎನ್ನಲಾಗಿದೆ.
ಆರೋಪಿ ಚೈತ್ರಾ ಕುಂದಾಪುರ ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಗೆ ಷಡ್ಯಂತ್ರ ಹೇಳಿಕೆಗೆ ಸಂಬಂಧಿಸಿದಂತೆ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿ ನಾಥ್ ಸ್ಪಷ್ಟನೆ ನೀಡಿದ್ದಾರೆ. ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಬಹುತೇಕ ಕ್ಲಿಯರ್ ಮಾಡಲಾಗಿದೆ. ಕೆಲವು ಸಣ್ಣ ಪುಟ್ಟ ಬಿಲ್ ಬಾಕಿ ಇರಬೇಕು, ಅದನ್ನು ಹೆಲ್ತ್ ಕಮಿಷನರ್ಗೆ ನೋಡಿಕೊಳ್ಳಲು ಹೇಳಿದ್ದೇನೆ ಎಂದಿದ್ದಾರೆ.
ಇಂದಿರಾ ಕ್ಯಾಂಟೀನ್ ಬಾಕಿ ಬಗ್ಗೆ ಚೈತ್ರಾಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ದೂರುದಾರ ಗೋವಿಂದ ಬಾಬು ವ್ಯವಸ್ಥಿತವಾಗಿ ಸಂಚು ರೂಪಿಸಿ ಚೈತ್ರಾ, ಗಗನ್ ಕಡೂರು, ಹಾಗೂ ಹಾಲಶ್ರೀ ಸ್ವಾಮೀಜಿ ಅವರು ಮೋಸ ಮಾಡಿದ್ದಾರೆ. ನಾನು ಬ್ಯಾಂಕಿಂದ 10 ಕೋಟಿ ರೂಪಾಯಿ ಲೋನ್ ಪಡೆದು ನಗದು ಹಾಗೂ ಡಿಡಿ ರೂಪದಲ್ಲಿ ಹಣ ನೀಡಿದ್ದೇನೆ. ವಂಚನೆಯ ಹಿಂದೆ ದೊಡ್ಡ ನಾಯಕರಿಲ್ಲ. ಇಂದಿರಾ ಕ್ಯಾಂಟೀನ್ ವ್ಯವಹಾರಕ್ಕೂ ವಂಚನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಿಸಿಬಿಗೆ ಎಲ್ಲಾ ರೀತಿಯ ಮಾಹಿತಿ ಹಾಗೂ ಅಗತ್ಯ ದಾಖಲೆ ನೀಡಿದ್ದೇನೆ. ನೋಟಿಸ್ ಕೊಟ್ಟು ವಿಚಾರಣೆಗೆ ಕರೆದರೆ ಸಿಸಿಬಿ ಮುಂದೆ ಹಾಜರಾಗುವೆ ಎಂದಿದ್ದಾರೆ.