ಸಿಡಬ್ಲೂಆರ್ಸಿ, ಸಿಡಬ್ಲೂಎಂಎ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ : 5000 ಕ್ಯೂಸೆಕ್ ನೀರು ತಮಿಳುನಾಡು ಪಾಲು | JANATA NEWS
ನವದೆಹಲಿ : ಅಂತಾರಾಜ್ಯ ಗಡಿ ಬಿಳಿಗುಂಡ್ಲುವಿನಲ್ಲಿ 5000 ಕ್ಯೂಸೆಕ್ ಕಾವೇರಿ ನದಿ ನೀರು ಬಿಡುವಂತೆ ಸಿಡಬ್ಲೂಆರ್ಸಿ ಮತ್ತು ಸಿಡಬ್ಲೂಎಂಎ ನಿರ್ದೇಶನದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಮೂಲಕ ಅತ್ಯಂತ ಬರಗಾಲ ಎದುರಿಸುತ್ತಿರುವ ಕರ್ನಾಟಕ ರಾಜ್ಯಕ್ಕೆ ಕುಡಿಯುವ ನೀರಿಗೆ ಸಹ ಪರದಾಡುವಂತ ತೀರ್ಪು ಹೊರಬಂದಂತಾಗಿದೆ.
ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳ ನಡುವಿನ ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿದೆ. ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.
ಪ್ರತಿಪಕ್ಷಗಳು ರಾಜ್ಯ ಸರ್ಕಾರದ ಪ್ರಯತ್ನವನ್ನು ಬಲವಾಗಿ ಖಂಡಿಸಿವೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ನ್ಯಾಯಾಲಯಕ್ಕೆ ಸೂಕ್ತ ಡೇಟಾವನ್ನು ಒದಗಿಸಲು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
ಪ್ರತಿ 15 ದಿನಗಳಿಗೊಮ್ಮೆ ಬಿಡುಗಡೆಯನ್ನು ಸೂಕ್ತ ಪ್ರಾಧಿಕಾರವು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಆದೇಶವನ್ನು ರವಾನಿಸುವಾಗ ಸಂಬಂಧಿತ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.