ಕರೋನಾ ರೂಪಾಂತರಿ ಕುರಿತು ಭಯ ಪಡುವ ಅಗತ್ಯ ಇಲ್ಲ, ಜನ ಸೇರುವ ಕಡೆ ಮಾಸ್ಕ್ ಧರಿಸಿ - ಸಿಎಂ | JANATA NEWS
ಬೆಂಗಳೂರು : ಕರೋನಾ ರೂಪಾಂತರಿ ಕುರಿತು ಭಯ ಪಡುವ ಅಗತ್ಯ ಇಲ್ಲ ಆದರೆ ಎಚ್ಚರಿಕೆಯಿಂದ ಇರುವ ಆಗತ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು ತಿಳಿಸಿದ್ದಾರೆ. ಅಲ್ಲದೇ, ಜನ ಸೇರುವ ಕಡೆ ಮಾಸ್ಕ್ ಧರಿಸಿ ಎಂದು ಸಿಎಂ ತಿಳಿಸಿದರು.
ಅಗತ್ಯ ಬಿದ್ದರೆ ಮತ್ತೆ ಲಸಿಕೆಯನ್ನು ನೀಡುವ ಪ್ರಕ್ರಿಯೆಗಳನ್ನು ಪುನಃ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕ್ರಿಸ್ಮಸ್ ಹಾಗೂ ಹೊಸವರ್ಷಾಚರಣೆಗೆ ಯಾವುದು ಕಟ್ಟುನಿಟ್ಟಿನ ಕ್ರಮಗಳಿಲ್ಲ ಆದರೆ ಜನರು ಜಾಗ್ರತೆ ವಹಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.
ಹೊಸ ಕೋವಿಡ್ 19 ಜೆಎನ್1 ರೂಪಾಂತರದ ಹರಡುವಿಕೆಯನ್ನು ತಗ್ಗಿಸುವ ಕ್ರಮಗಳ ಕುರಿತು ಚರ್ಚಿಸಲು ಸಿಎಂ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.