Thu,Feb13,2025
ಕನ್ನಡ / English

ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ, ಕನ್ನಡಿಗರೇಕೆ ಕೊಡಬೇಕು ಕಪ್ಪ? - ಬಿಜೆಪಿ ಪ್ರಶ್ನೆ | JANATA NEWS

20 Feb 2024
1800

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಪಕ್ಷದ ಗುಲಾಮಿ ಮನಸ್ಥಿತಿಯ ಸದಸ್ಯರೇ, "ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ" ಕನ್ನಡಿಗರೇಕೆ ಕೊಡಬೇಕು ಕಪ್ಪ? ಕಣ್ಣಿಗೆ ಕಂಡಿದ್ದು ಕೇರಳದ ವಯನಾಡಿಗೆ ಕೊಟ್ಟ ₹15 ಲಕ್ಷ! ಕಣ್ಣಿಗೆ ಕಾಣದ‌ ಕನ್ನಡಿಗರ ಮೂಟೆ ಮೂಟೆ ಹಣ ಹೋಗುತ್ತಿರುವುದು ದೆಹಲಿಯ 10 ಜನಪಥ್ ಮನೆಗೆ! ಮಜವಾದಿ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರ(#ATMSarkara) ಲೂಟಿ ಹೊಡೆದು ಮೂಟೆಗಳಲ್ಲಿ ಕನ್ನಡಿಗರ ತೆರಿಗೆ ಹಣವನ್ನು ಸಾಗಿಸಿ, ಖಜಾನೆ ಖಾಲಿ ಎನ್ನುತ್ತಿದೆ ನಾಡ ದ್ರೋಹಿ ಸರ್ಕಾರ!

"ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ - ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ". ಇದು ರಾಜ್ಯದ ಕರ್ನಾಟಕ ಕಾಂಗ್ರೆಸ್ ಪಕ್ಷದ ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು. ರಾಹುಲ್ ಗಾಂಧಿ ಅವರ ವಯನಾಡ್ ಕ್ಷೇತ್ರದಲ್ಲಿ ಆನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಮೃತನಾದರೆ, ಆ ಆನೆ ಕರ್ನಾಟಕಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಮೃತನಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹15 ಲಕ್ಷ ಪರಿಹಾರ ನೀಡಿದೆ.

ಕರ್ನಾಟಕದಲ್ಲಿ 600 ಕ್ಕೂ ಹೆಚ್ಚು ರೈತರು ಸಿಎಂ ಸಿದ್ದರಾಮಯ್ಯ ಅವರ ರೈತ ವಿರೋಧಿ ಆಡಳಿತಕ್ಕೆ ಬೇಸತ್ತು ನೇಣಿಗೆ ಶರಣಾದರೆ, ಅವರ ಆತ್ಮಹತ್ಯೆಯನ್ನು ಗೇಲಿ ಮಾಡಿ, ಬಿಡಿಗಾಸು ಪರಿಹಾರ ನೀಡದ ಕಾಂಗ್ರೆಸ್ ಸರ್ಕಾರ, ಕೇರಳದಲ್ಲಿ ಸತ್ತ ವ್ಯಕ್ತಿಗೆ ರಾಜ್ಯ ಬೊಕ್ಕಸದಿಂದ ಪರಿಹಾರ ನೀಡಿದ್ದು, ಕಾಂಗ್ರೆಸ್‌ನ ರೈತ ವಿರೋಧಿ ಮನಸ್ಥಿತಿಯ ಜ್ವಲಂತ ನಿದರ್ಶನ.

ಅಷ್ಟಕ್ಕೂ ಸಚಿವ ಈಶ್ವರ ಖಂದ್ರೆ ಬರೆದ ಪತ್ರದಲ್ಲಿ ಯಾವುದೇ ಸಂವಿಧಾನಿಕ ಹುದ್ದೆಯಲ್ಲಿಲ್ಲದ ಕಾಂಗ್ರೆಸ್ ಕಲೆಕ್ಷನ್ ಏಜೆಂಟ್ ಕೆ.ಸಿ.ವೇಣುಗೋಪಾಲ ಅವರನ್ನು ಏಕೆ ಹೆಸರಿಸಲಾಗಿದೆ ಎಂಬುದನ್ನು ಕಲೆಕ್ಷನ್ ಮಾಸ್ಟರ್ ಸಿಎಂ ಸಿದ್ದರಾಮಯ್ಯನವರೇ ತಿಳಿಸಬೇಕು. ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪದಿಂದ ರಾಜ್ಯದ ತೆರಿಗೆದಾರರ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ‌. ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಿಜಕ್ಕೂ ತಾಕತ್ತು ದಮ್ಮು ಇದ್ದರೆ, ಕನ್ನಡಿಗರ ತೆರಿಗೆ ಹಣವನ್ನು ಅನಗತ್ಯವಾಗಿ ಪೋಲು ಮಾಡಿ ಎಂದು ನಿಮಗೆ ಸೂಚನೆ ನೀಡುವ ಎಐಸಿಸಿ ಕಚೇರಿ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಿ.

English summary :Courageously question fake Gandhis" Why should Kannadigas give Royalty? - BJP

ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ

ನ್ಯೂಸ್ MORE NEWS...