Thu,Sep11,2025
ಕನ್ನಡ / English

ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು | JANATA NEWS

07 Jul 2025
524

ಬೆಂಗಳೂರು : ಆರ್ಎಸ್ಎಸ್ ಬ್ಯಾನ್ ಮಾಡುವ ಬಗ್ಗೆ ಮಾತನಾಡುವ ಮೂಲಕ ನಿರಂತರ ಟೀಕೆಗೆ ಗುರಿಯಾಗಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಮಾಜಿ ಸಂಸದ ಹಾಗೂ ಬಿಜೆಪಿ ನಾಯಕ ಪ್ರತಾಪ ಸಿಂಹ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಮದ್ಯಮದೊಂದಿಗೆ ಈ ಕುರಿತು ಮಾತನಾಡಿರುವ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

"2.5ವರ್ಷ ಆಯ್ತು ಈ ಸರ್ಕಾರ ಅಧಿಕಾರಕ್ಕೆ ಬಂದು... ಪ್ರಿಯಾಂಕಾ ಖರ್ಗೆ ಅವರು ತಮ್ಮ ಇಲಾಖೆ ಬಗ್ಗೆ ಮಾತಾಡಿದ್ದೇ ಇಲ್ಲ, ತಾವು ಮಾಡಿದಂತಹ ಸಾಧನೆ ಬಗ್ಗೆ ಹೇಳಿಕೊಂಡಿದ್ದೇ ಇಲ್ಲ. ವರ್ಷದಲ್ಲಿ 100 ಸಾರಿ ಪತ್ರಿಕಾಗೋಷ್ಠಿ ನಡೆಸಿದರೂ ಬಿಜೆಪಿ ಯನ್ನು ಬೈಯ್ಯೋವಂತದ್ದು.. ಆರ್ಎಸ್ಎಸ್ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸೊವಂತದ್ದು. ಇದು ಬಿಟ್ರೆ ಏನು ಕೂಡ ಅವರ ಬಾಯಿಂದ ಹೊರಗೆ ಬರೆದಿಲ್ಲ. .. ಸದನದ ಒಳಗೆ ಫೈಲ್ಸ ಪ್ರಿಯಾಂಕಾ, ಸದನದ ಹೊರಗೆ ಕೂಗುಮಾರಿ ಪ್ರಿಯಾಂಕಾ ಆಗಿ ಬಿಡ್ತೀರಿ." ಎಂದು ಹೀಯಾಳಿಸಿದ್ದಾರೆ.

"ಎನ್ ಸರ್ ನೀವು ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀರಾ? ನೀವು ಯಾರ ಮಗಳ ಹೆಸರು ಇಟ್ಕೊಂಡಿದ್ದರಲ್ಲ ಆ ರಾಜೀವ್ ಗಾಂಧಿ ಕೂಡ ದೇಶವನ್ನು ಅಳಿದರೂ ಅವರ ಕೈಯಲ್ಲೇ ಆಗಿಲ್ಲ. ರಾಜೀವ್ ಗಾಂಧಿಯನ್ನು ಹೆತ್ತ ಅಂತಹ ಇಂದಿರಾ ಗಾಂಧಿ 16 ವರ್ಷ ದೇಶ ಅಳಿದರೂ ಅವರು ಬ್ಯಾನ್ ಮಾಡಿದ್ರು, ಆದರೆ ಬಳಿಕ ಅಧಿಕಾರ ಕಳೆದುಕೊಂಡರು. ಆರ್ಎಸ್ಎಸ್ ಮಾತ್ರ ತನ್ನ ಸಮಾಜ ಸೇವೆ ಮುಂಡುವರೆಸುತ್ತಾ ಹೋಯ್ತು. ಇಂದಿರಾ ಗಾಂಧಿಗೆ ಜನ್ಮ ಕೊಟ್ಟಂತಹ ನೆಹರೂ ಕೂಡ 17 ವರ್ಷ ಅಳಿದರೂ, ಬ್ಯಾನ್ ಮಾಡಿ ನಂತರ ಬ್ಯಾನ್ ವಾಪಸ್ ತೆಗೆದುಕೊಳ್ಳುವ ಅನಿವಾರ್ಯತೆ ಬಂತು... 1962ರ ಚೀನಾ ಯುದ್ಧದಲ್ಲಿ ಆರ್ಎಸ್ಎಸ್ ಸೇವೆಯನ್ನು ಶ್ಲಾಘಿನೆ ಮಾಡುವಂತ ಅನಿವಾರ್ಯತೆ ಬಂತು. ನೆಹರೂ ಅವರ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ. ಹೆಸರಿನಲ್ಲೂ ಸ್ವಂತಂತೆ ಇಲ್ಲ. ಖರ್ಗೆ ಕೂಡ ನಿಮ್ಮ ತಂದೆ ಇಂದ ಬಂದ ಬಳುವಳಿ... ವ್ಯಕ್ತಿತ್ವದಲ್ಲೂ ಸ್ವಂತತೆ ಇಲ್ಲ..." ಎಂದು ವಾಗ್ದಾಳಿ ನಡೆಸಿದ್ದಾರೆ.

ಐಟಿಬಿಟಿ ಸಚಿವರಾಗಿ ನಿಮ್ಮ ಸಾಧನೆ ಹೇಳಿ. ಬೇರೆ ರಾಜ್ಯಗಳಿಗೆ ಕಂಪನಿಗಳು ಯಾಕೆ ಹೋಗುತ್ತಿದೆ ಏಕೆ. ನಿಮ್ಮ ಅಪ್ಪ ದೊಡ್ಡ ದೊಡ್ಡ ನಾಯಕರನ್ನ ಬಲಿ ಕೊಟ್ಟು, ಅವರ ಮುಖ್ಯಮಂತ್ರಿ ಆಸೆಯನ್ನು ಬಳಿಕೊಟ್ಟು ನಿಮ್ಮನ್ನ ಮಂತ್ರಿ ಮಾಡಿದ್ದಾರೆ... ಇದೇ ರೀತಿ ಕೂಗು ಮಾರಿ ರೀತಿ ಮಾತನಾಡುತ್ತಿದ್ರೆ, ನಿಮ್ಮನ್ನ ಯಾರೂ ಮುಖ್ಯಮಂತ್ರಿ ಮಾಡಲ್ಲ. ನಿಮ್ಮಪ್ಪನ್ನೇ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಲಿಲ್ಲ. ಇನ್ನೂ ನಿಮ್ಮನ್ನು ಮಾಡುತ್ತಾ? ಇದನ್ನೆಲ್ಲಾ ಬಿಟ್ಟುಬಿಡಿ ಸರ್. ಆರ್‌ಎಸ್‌ಎಸ್ ಅನ್ನು ಬೈದ್ರೆ ಅಧಿಕಾರ ಸಿಗಲ್ಲ, ಎಂದು ಟೀಕಿಸಿದ್ದಾರೆ.

"ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಮಾತಾಡಿ. ನಿಮ್ಮ ವಿದ್ಯೆಗೆ ಮೀರಿ ನಿಮಗೆ ಈ ಖಾತೆ ಕೊಟ್ಟಿದ್ದಾರೆ. ಆ ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ ಒಳ್ಳೆ ಕೆಲಸ ಮಾಡಿ ಸರ್", ಎಂದು ಕಿವಿಮಾತು ಹೇಳಿದ್ದಾರೆ.

"ಸಿದ್ದರಾಮಯ್ಯ ನವರು ಯುವನಿದಿ ಕೊಡುತ್ತೇನೆ ಎಂದು ಬೊಬ್ಬೆ ಹೊಡೆದು ಎರಡೂವರೆ ವರ್ಷ ಆಯ್ತು ಇಲ್ಲಿವರೆಗೂ ಪ್ರಾರಂಭನೆ ಮಾಡಿಲ್ಲ... ಹೀಗಿರುವಾಗ ಇಲಾಖೆ ಇಂದ ಏನಾದರೂ ಸಹಕಾರ ಮಾಡುವ ಬಗ್ಗೆ ಯೋಚನೆ ಮಾಡಿ ಸರ್" ಎಂದು ಹೇಳಿದ್ದಾರೆ.

English summary :You have been given account beyond your education, spend some time on the account - Former MP Singh advises Minister Kharge.

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...