ಕಾವೇರಿಯಲ್ಲಿ ಅಜಾತಶತ್ರು ವಾಜಪೇಯಿ ಅಸ್ತಿ ವಿಸರ್ಜನೆ ಕಾರ್ಯಕ್ರಮ | Janata news
ಬೆಂಗಳೂರು : ಕಳೆದ ಗುರುವಾರ ಅಗಷ್ಟ 16 ರಂದು ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಪೇಯಿ ಅವರ ಚಿತಾಭಸ್ಮದ ಒಂದು ಬಾಗವನ್ನು ಇದೇ ಗುರುವಾರ 23ರಂದು ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದರು.
ದೇಶದ ಎಲ್ಲ ಪ್ರಮುಖ ನದಿಗಳಲ್ಲಿ ವಾಜಪೇಯಿ ಅವರ ಅಸ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಶ್ರೀರಂಗಪಟ್ಟಣದ ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಆರ್.ಅಶೋಕ್ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಅಸ್ತಿ ವಿಸರ್ಜನೆ ಮಾಡಲಾಗುತ್ತದೆ, ಎನ್ನಲಾಗಿದೆ.
ಮಹಾತ್ಮ ಗಾಂಧಿ ಸೇರಿ ದೇಶದ ಅನೇಕ ಗಣ್ಯರ ಅಸ್ತಿಯನ್ನು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗಿದ್ದು, ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ಅಸ್ತಿ ವಿಸರ್ಜಿಸಿದರೆ ಮೃತಪಟ್ಟವರಿಗೆ ಮೋಕ್ಷ ಸಿಗಲಿದೆ, ಎಂಬ ಬಲವಾದ ನಂಬಿಕೆ ಇದೆ.