ಜಿಮ್ ಟ್ರೈನರ್ ಅಪಹರಣ ಮತ್ತು ಮಾರಣಾಂತಿಕ ಹಲ್ಲೆ: ನಟ ದುನಿಯಾ ವಿಜಯ್ ಬಂಧನ | Janata news
ಬೆಂಗಳೂರು : ಸದಾ ವಿವಾದದ ಸುಳಿಯಲ್ಲಿರುವ ನಟ ದುನಿಯಾ ವಿಜಿ ಈಗ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದುಹೊಸ ವಿವಾದಕ್ಕೆ ಸಿಲುಕಿದ್ದು, ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಸಹಚರರು, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ, ಎಂದು ಹೇಳಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿದ ಪೊಲೀಸರು ನಟ ದುನಿಯಾ ವಿಜಯ್ ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಅವರ ತಂಡ, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ, ಎಂದು ಪಾನಿಪುರಿ ಕಿಟ್ಟಿ ನೀಡಿದ ದೂರಿನಡಿಯಲ್ಲಿ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ.
ದುನಿಯಾ ವಿಜಯ್ ಹಾಗೂ ಅವರ ತಂಡದವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಿಸ್ಟರ್ ಬೆಂಗಳೂರು ಸ್ಪರ್ಧೆ ನೋಡಲು ಬಂದಿದ್ದ ನನ್ನ ಅಣ್ಣನ ಮಗ ಜಿಮ್ ಟ್ರೈನರ್ ಆಗಿರುವ ಮಾರುತಿ ಮಾರುತಿಗೌಡನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಪಾನಿಪುರಿ ಕಿಟ್ಟಿ ಭಾನುವಾರ ರಾತ್ರಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡ ಪೊಲೀಸರು ದುನಿಯಾ ವಿಜಯ್ಗೆ ಕರೆ ಮಾಡಿ ಮಾರುತಿಗೌಡನ ಜತೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ಹೇಳಿದರು.
ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ಹಲ್ಲೆಗೊಳಗಾದ ಜಿಮ್ ಟ್ರೇನರ್ ಮಾರುತಿಗೌಡ ಅವರನ್ನು ಕರೆದುಕೊಂಡು ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಬಂದದ್ದಾರೆ. ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಎರಡು ಗುಂಪಿನವರ ನಡುವೆ ಮಾತಿನ ಚಕಮಕಿ ನಡೆದು, ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿ, ಪರಿಸ್ಥಿತಿ ನಿಯಂತ್ರಿಸಲು ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಯ್ತು.
ಸದ್ಯ ಬಂಧನಕ್ಕೊಳಗಾದ ವಿಜಯ್ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ದುನಿಯಾ ವಿಜಯ್ ವಿರುದ್ಧ ಕಿಡ್ನಾಪ್ , ಹಲ್ಲೆ, ಕೊಲೆ ಜೀವ ಬೆದರಿಕೆ, ಐಪಿಸಿ ಸೆಕ್ಷನ್ 365, 342 , 325, 506 , ಪ್ರಕರಣ ದಾಖಲಾಗಿದ್ದು, ದುನಿಯಾ ವಿಜಯ್ ಹಾಗೂ ಸಹಚರರನ್ನು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗುವುದು, ಎಂದು ಹೇಳಲಾಗಿದೆ. ಅನೇಕ ಪ್ರಕರಣಗಳಲ್ಲಿ ಬಾಗಿಯಾಗಿರುವ ದುನಿಯಾ ವಿಜಯನನ್ನು ರೌಡಿ ಪಟ್ಟಿಗೆ ಸೇರಿಸುವ ಸಾದ್ಯತೆಗಳಿವೆ ಎಂದು ಹೇಳಲಾಗಿದೆ.