ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಪ್ರಜ್ವಲ್ ರೇವಣ್ಣ | Janata news
ಮಂಡ್ಯ : ದೇವೇಗೌಡರ ಕುಟುಂಬದ ಮೂರನೇ ತಲೆಮಾರಿನ ಕುಡಿ ಪ್ರಜ್ವಲ್ ರೇವಣ್ಣ ಅವರು, ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು.
ರಾಮನಗರದಿಂದಲೂ ನಾನು ಸ್ಪರ್ಧಿಸುವುದಿಲ್ಲ ಹಾಗೂ ಮಂಡ್ಯದಿಂದಲೂ ಸ್ಪರ್ಧಿಸುವುದಿಲ್ಲ. ಈ ಉಪಚುನಾವಣೆಯಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ನಾನೇ ಸ್ವತಃ ದೇವೇಗೌಡರ ಬಳಿ ಮನವಿ ಮಾಡಿದ್ದೇನೆ ಎಂದು ಪ್ರಜ್ವಲ್ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೇಳಿದ್ದು ನಿಜ ಎರಡು ಕ್ಷೇತ್ರಗಳ ಮೇಲೆ ನಾನು ಗಮನಹರಿಸಿ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದೆ ಆದರೆ ಟಿಕೆಟ್ ಸಿಗಲಿಲ್ಲ. ಆದರೆ ಈ ಬಾರಿ ಲೋಕಸಭೆ ಚುನಾವಣೆಗೆ ಟಿಕೆಟ್ ದೊರಕುವ ಸಾಧ್ಯತೆ ಇದೆ, ಅಕಸ್ಮಾತ್ ಈ ಬಾರಿಯೂ ಸಿಗಲಿಲ್ಲವೆಂದರೆ ಹಣೆಬರಹ ಸರಿ ಇಲ್ಲವೆಂದು ಸುಮ್ಮನಾಗುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ.