ನ್ಯಾಯಾಲಯಕ್ಕೆ ಅವಮಾನ : ಚೈತ್ರಾಳಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಣೆ | Janata news
ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಕುಂದಾಪುರ ಮೂಲದ ಯುವತಿ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.
ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಮ್ಮ ಸಂಗಡಿಗರ ಜೊತೆಗೆ ಹಲ್ಲೆ ಮಾಡಿ ಜೈಲು ಸೇರಿ, ಸದ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಕೋರ್ಟ್ ಗೆ ತಿಳಿಸಿದ್ದರು.
ಆದರೆ ಇಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚೈತ್ರಾಳಿಗೆ ನ್ಯಾಯಾಲಯ ಆದೇಶವಿದ್ದರೂ ಕೂಡ ನ್ಯಾಯಾಲಯಕ್ಕೆ ಹಾಜರಾಗದೇ, ಆಸ್ಪತ್ರೆಯಲ್ಲೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ನ್ಯಾಯಾಪೀಠ, ಚೈತ್ರಾಳ ಈ ನಡೆಗೆ ಬೇಸರ ವ್ಯಕ್ತಪಡಿಸಿ, ಇವರ ಈ ನಡೆ ನ್ಯಾಯಾಂಗಕ್ಕೆ ಮಾಡಿರುವ ಅವಮಾನವಾಗಿದೆ ಹೀಗಾಗಿ ಚೈತ್ರಾಳಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಚೈತ್ರಾ ನವೆಂಬರ್ 19ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿದೆ.