Sun,May19,2024
ಕನ್ನಡ / English

ತುಳಸಿ ಹಬ್ಬದ ಮಹತ್ವ | Janata news

20 Nov 2018
3766

ಮೈಸೂರು : ಚಾಂದ್ರಮಾನ ಕಾರ್ತಿಕಮಾಸ ಶುಕ್ಲ ಪಕ್ಷದ 12ನೇ ದಿನವೆಂದರೆ ದ್ವಾದಶಿಯಂದು ತುಳಸಿ ಹಬ್ಬ ಅಥವಾ ತುಳಸಿ ಪೂಜೆಯನ್ನು ಮಾಡುತ್ತಾರೆ. ಔಷಧ ಗುಣವುಳ್ಳ ಪವಿತ್ರ ತುಳಸಿಯನ್ನು ಪೂಜಿಸುವ ತುಳಸಿ ಹಬ್ಬ ತುಳಸಿ ಮದುವೆ. ಉತ್ಥಾನ ದ್ವಾದಶಿಯಂದು ಮದುವೆ ಎಂದು ಕರೆಯುವ ಪೂಜೆ ಜರುಗುವುದು ವಿಶೇಷ.

ಆಷಾಢ ಮಾಸದ ಪ್ರಥಮ ಏಕಾದಶಿಯಂದು ಆರಂಭವಾಗುವ ಚಾತುರ್ಮಾಸ ವ್ರತ ಈ ಉತ್ಥಾನ ದ್ವಾದಶಿಯಂದು ಪರಿಸಮಾಪ್ತಿಗೊಳ್ಳುತ್ತದೆ. ಈ ದಿನ ಕಳೆದ ನಾಲ್ಕು ತಿಂಗಳ ಕಾಲ ಯೋಗನಿದ್ರೆಯಲ್ಲಿರುವ ವಿಷ್ಣುವನ್ನು ಎಬ್ಬಿಸಿ, ತುಳಸಿಯೊಂದಿಗೆ ವಿವಾಹ ಮಾಡಲಾಗುತ್ತದೆ.
Tulasi

ತುಳಸಿ ಹಬ್ಬದಂದು ನೆಲ್ಲಿ ಟೊಂಗೆಯನ್ನು ಬೃಂದಾವನದಲ್ಲಿ ನೆಟ್ಟು, ನೆಲ್ಲಿಕಾಯಿಯಿಂದಲೇ ಸಂಜೆ ಆರತಿ ಬೆಳಗುವುದು ವಿಶೇಷ. ನೆಲ್ಲಿಕಾಯಿಗೆ ಧಾತ್ರಿ ಎನ್ನುತ್ತಾರೆ. ಧಾತ್ರಿ ಎಂದರೆ ಲಕ್ಷೀ ಎಂದರ್ಥ. ತುಳಸಿ ಎಲ್ಲಿದೆಯೋ ಅಲ್ಲಿ ಹರಿ ಸನ್ನಿಧಾನವಿದೆ. ಹೀಗಾಗಿ, ಶ್ರೀಹರಿಯ ಜತೆ ಲಕ್ಷ್ಮೀಯನ್ನು ಪೂಜಿಸುವ ಉದ್ದೇಶದಿಂದ ನೆಲ್ಲಿಯ ಟೊಂಗೆಯನ್ನು ತುಳಸಿಯ ಜತೆ ಇಟ್ಟು ತುಳಸಿಗೆ ಮದುವೆ ಮಾಡುತ್ತಾರೆ.

ತುಳಸಿಗೆ ಅರಿಶಿಣ ಕುಂಕುಮ ಹಚ್ಚಿ, ಹೂವುಗಳಿಂದ ಸಿಂಗರಿಸಿ ನಂತರ ವಿಷ್ಣುಸೂಕ್ತ ಪಠಿಸುತ್ತಾ ಪೂಜೆ ಮಾಡುವುದು ಶ್ರೇಷ್ಠ. ಕಾರ್ತಿಕ ಮಾಸದಲ್ಲಿ ಬೇಗ ಕತ್ತಲಾಗುವುವದರಿಂದ ಪ್ರತಿದಿನವೂ ತುಳಸಿ ಕಟ್ಟೆಯ ಮುಂದೆ ದೀಪ ಹಚ್ಚಿಡುವ ಪದ್ಧತಿ ಇದೆ.
Tulasi
ಪೌರಾಣಿಕ ಹಿನ್ನೆಲೆ -
ಸಮುದ್ರಮಥನ ಸಮಯದಲ್ಲಿ ಬಂದು ಅಮೃತ ಕಳಸವನ್ನು ಮಹಾವಿಷ್ಣು ಪಡೆದುಕೊಳ್ಳುವಾಗ ಆತನ ನೇತ್ರದಿಂದ ಆನಂದಬಾಷ್ಪ ಉಕ್ಕಿ ಬಂತು. ಅದರ ಒಂದು ಹನಿ ಕಳಸದಲ್ಲಿ ಬಿದ್ದಾಗ ತುಳಸಿ ಗಿಡವಾಯಿತು. ಲಕ್ಷ್ಮೀಯೊಂದಿಗೆ ತುಳಸಿಯನ್ನೂ ವಿಷ್ಣು ಮದುವೆಯಾದನೆಂದು ಹೇಳಲಾಗುತ್ತದೆ.

ಅಮೃತದಿಂದ ಜನಿಸಿದಂತಹ ತುಳಸಿಯನ್ನು ಯಾವ ವಿಧವಾಗಿ ಉಪಯೋಗಿಸಿದರೂ ಅದು ಅಮೃತಮಯವಾಗುತ್ತದೆ. ಇಷ್ಟು ಪವಿತ್ರವಾದ ತುಳಸಿ ಶ್ರೀಮನ್ನಾರಾಯಣನಿಗೆ ಲಕ್ಷ್ಮಿಯಷ್ಟೇ ಪ್ರಿಯಳು. ಆದುದರಿಂದಲೇ ಮೂರೂ ಲೋಕಗಳಲ್ಲಿ ತುಳಸಿಗೆ ಸಮಾನವಾದುದು ಯಾವುದೂ ಇಲ್ಲ ಎಂದು ತಿಳಿಯಲಾಗಿದೆ.
Tulasi
ತುಳಸಿ ವಿವಾಹದ ಹಬ್ಬಕ್ಕೂ ಹಿನ್ನೆಲೆಯಿದೆ. ಆತನೊಬ್ಬ ಭಯಂಕರ ರಾಕ್ಷಸ. ಹೆಸರು ಜಲಂಧರ. ಆತನ ಪತ್ನಿ ವೃಂದಾ, ಪತಿವ್ರತೆ. ಅದಕ್ಕಾಗಿಯೇ ಜಲಂಧರನಿಗೆ ಸೋಲು ಎಂಬುದೇ ಇರಲಿಲ್ಲ. ಇದರಿಂದ ಅಹಂಕಾರದ ಮುದ್ದೆಯಾದ ಜಲಂಧರ ದೇವತೆಗಳ ಮೇಲೆ ಯುದ್ಧ ಮಾಡಿ ಸೋಲಿಸುತ್ತಾನೆ. ಈತನ ಉಪಟಳ ತಾಳಲಾಗದ ದೇವತೆಗಳು ವಿಷ್ಣುವಿನ ಮೊರೆ ಹೋಗುತ್ತಾರೆ. ಇದರಿಂದ ಜಲಂಧರನ ವೇಷಧರಿಸಿದ ವಿಷ್ಣು ವೃಂದಾಳ ಪಾತಿವ್ರತ್ಯವನ್ನು ಭಂಗ ಮಾಡುತ್ತಾನೆ. ಜಲಂಧರ ಯುದ್ಧದಲ್ಲಿ ಸಾಯುತ್ತಾನೆ. ಇದರಿಂದ ಕೋಪಗೊಂಡ ವೃಂದಾ, ವಿಷ್ಣುವಿಗೆ ಶಾಪನೀಡಿ ತನ್ನ ಪತಿಯ ಶವದೊಂದಿಗೆ ಅಗ್ನಿಗೆ ಹಾರುತ್ತಾಳೆ. ಆನಂತರ ವೃಂದಾ ತುಳಸಿಯಾಗಿ ಪಾರ್ವತಿ ತಯಾರಿಸಿದ ಬೃಂದಾವನದಲ್ಲಿ ಜನಿಸುತ್ತಾಳೆ. ಇವಳೇ ರುಕ್ಮಿಣಿಯಾಗಿ ಕಾರ್ತಿಕ ಶುದ್ಧ ದ್ವಾದಶಿಯಂದು ಕೃಷ್ಣನನ್ನು ವಿವಾಹವಾಗುತ್ತಾಳೆ ಎಂಬ ಪ್ರತೀತಿಯಿದೆ.
Tulasi
ಇಷ್ಟೆಲ್ಲಾ ಪೌರಾಣಿಕ ಹಿನ್ನೆಲೆಯಿರುವ ತುಳಿಸಿಯಲ್ಲಿ ಸಾಕಷ್ಟು ಔಷಧೀಯ ಗುಣಗಳೂ ಇವೆ. ಕ್ರಿಮಿ, ಕೀಟಗಳೂ ಮನೆಯೊಳಗೆ ಹೋಗದಂತೆ ತಡೆಯುವ ಶಕ್ತಿ ಈ ಪುಟ್ಟ ಗಿಡಕ್ಕಿದೆ. ಆ ಕಾರಣಕ್ಕೆ ಪ್ರತಿಯೊಬ್ಬ ಹಿಂದೂವಿನ ಮನೆಯಲ್ಲಿಯೂ ತುಳಸಿ ಕಟ್ಟೆ ಅಥವಾ ಗಿಡವಿದ್ದು, ಜನರು ಭಯ ಭಕ್ತಿಯಿಂದ ಪೂಜಿಸುತ್ತಾರೆ.
Tulasi

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----



English summary :Tulasi Pooja

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...