ಕನ್ನಡ ಚಲನಚಿತ್ರದ ದಿಗ್ಗಜ ನಟ ಅಂಬರೀಶ್ ವಿಧಿವಶ | Janata news
ಬೆಂಗಳೂರು : ಕನ್ನಡ ಚಲನಚಿತ್ರದ ದಿಗ್ಗಜ ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿನ್ನೆ ಶನಿವಾರ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು.
ಮೇ 29, 1952ರಲ್ಲಿ ಜನಿಸಿದ ಅಂಬರೀಶ್ ಮೂಲತಃ ಹೆಸರು ಅಮರನಾಥ್ ಹುಚ್ಚೇಗೌಡ, ಅಂಬರೀಶ್ ಅವರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆಯವರು. ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಅವರ ಈಚೆಗೆ ಬಿಡುಗಡೆಯಾದ, ಅಂಬಿ ನಿಂಗ್ ವಯಸ್ಸಾಯ್ತೋ, ಚಿತ್ರದ ವರೆಗೂ ತಮ್ಮ ಮನೋಜ್ಞ ಅಭಿನಯ ನೀಡಿದ್ದರು.
ಸಾರ್ವಜನಿಕರಿಗಾಗಿ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆಯನ್ನು ಕಂಠಿರವ ಸ್ಟೇಡಿಯಂ ನಲ್ಲಿ ಮಾಡಲಾಗಿದ್ದು, ಬೆಳಿಗ್ಗೆ 8 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು.