ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಭಾರತ ರತ್ನ, ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ಭಾರತ ರತ್ನ | Janata news
ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಮೂವರು ಗಣ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡ ಗೌರವಿಸಲಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ರತ್ನ ಪುರಸ್ಕೃತರಾಗಿದ್ದಾರೆ. ಅಲ್ಲದೆ ನೇನಾಜಿ ದೇಶಮುಖ್(ಸಮಾಜ ಸುಧಾರಕ) ಮತ್ತು ಡಾ. ಭೂಪೇನ್ ಹಝೇರಿಕಾ (ಗಾಯಕ) ಅವರಿಗೆ ಭಾರತ ರತ್ನ ಪ್ರಶಸ್ತಿ, ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ. ನಾಳೆ 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
ಆದರೆ ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ಭಾರತ ರತ್ನ, ಕರ್ನಾಟಕದ ಕೋಟ್ಯಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ. ಶತಾಯುಷಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಈ ಬಾರಿಯೂ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯ ಕೇಳಿಬಂದಿದ್ದವು. ಅಷ್ಟೇ ಅಲ್ಲದೇ ರಾಜ್ಯ ಕಾಂಗ್ರೆಸ್ ಹಾಗು ಬಿಜೆಪಿ ನಾಯಕರುಗಳು ಸಹ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದರು. ಕರ್ನಾಟಕದಾದ್ಯಂತ ಭಾರಿ ಆಗ್ರಹಗಳು ಕೂಡ ಕೇಳಿಬಂದಿದ್ದವು. ಆದರೆ ಇದೀಗ ಕರ್ನಾಟಕದ ಕೋಟ್ಯಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ.