ಜಾತ್ರೆಯಲ್ಲಿ ಬಲೂನ್ ಸ್ಫೋಟ:ಅಪಾಯದಿಂದ ಪಾರಾದ ಸುತ್ತೂರು ಶ್ರೀ | Janata news
ಮೈಸೂರು: : ಮೈಸೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯ ಉದ್ಘಾಟನೆ ವೇಳೆ ಭಾರೀ ಅವಘಡ ಸಂಭವಿಸಿದ್ದು ಅದೃಷ್ಟವಶಾತ್ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀ ಪಾರಾಗಿದ್ದಾರೆ. ನೈಟ್ರೋಜನ್ ಬಲೂನ್ ಸ್ಫೋಟಗೊಂಡು ಸ್ಥಳದಲ್ಲೇ ಇದ್ದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಅಲ್ಲೇ ಸ್ಥಳದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ. ಕುಸ್ತಿ ಪಂದ್ಯಾವಳಿಯಲ್ಲಿ ಬಲೂನ್ಗಳ ಗುಚ್ಛ ಹಾರಿ ಬಿಡುವ ಮೂಲಕ ಉದ್ಘಾಟನೆ ಮಾಡಲು ತಯಾರಿಮಾಡಿಕೊಳ್ಳಲಾಗಿತ್ತು. ಆದರೆ, ಬಲೂನ್ಗಳ ಗುಚ್ಛ ಹಾರಿ ಬಿಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನೂರಾರು ಬಲೂನ್ಗಳ ಗೊಂಚಲು ಸ್ಫೋಟಗೊಂಡಿದೆ. ಘಟನಾ ಸ್ಥಳದ ಪಕ್ಕದಲ್ಲೇ ಕುಸ್ತಿಪಟುಗಳು, ಸಾರ್ವಜನಿಕರು ಇದ್ದರು. ಅವರಲ್ಲಿ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ದೇಶಿಕೇಂದ್ರ ಸ್ವಾಮಿಜಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಶ್ರಮದಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಎಂಎಲ್ಸಿ ಮರಿತಿಬ್ಬೇಗೌಡ, ಕಲ್ಮಹಳ್ಳಿ ಶಿವಕುಮಾರ್ ಹಾಗೂ ಹೊಸಕೋಟೆ ದೇವಣ್ಣ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಲ್ಮಳ್ಳಿ ಶಿವಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.