ಪಿಸ್ತೂಲ್ ಇಂದ ಶೂಟ್ ಮಾಡಿಕೊಂಡು ಕಾರಿನಲ್ಲೇ ವ್ಯಕ್ತಿ ಆತ್ಮಹತ್ಯೆ | Janata news
ಹಳಿಯಾಳ : ಕಾರಿನೊಳಗೇ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾನಾಪುರ ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಮೈಸೂರಿನ ಜಿಲ್ಲೆಯ ಟಿ.ನರಸೀಪುರ ನಿವಾಸಿ ಮಂಜುನಾಥ ವಾಸು ಎಂದು ಹೇಳಲಾಗುತ್ತಿದೆ. ಮೃತವ್ಯಕ್ತಿ ಕಾರಿನಲ್ಲೇ ಕುಳಿತು ನಾಡ ಪಿಸ್ತೋಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳೀಯರ ಮಾಹಿತಿ ಆಧಾರದ ಮೇಲೆ ತಿಳಿದುಬಂದಿದೆ. ಹಳಿಯಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದು ಇನ್ನೂ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
English summary :Person shoots himself using local gun, seating in car