ಕುಡಿದ ಅಮಲಿನಲ್ಲಿ ಸ್ಕೂಲ್ ಬಸ್ ಚಾಲನೆ, 13 ವಿದ್ಯಾರ್ಥಿಗಳಿಗೆ ಗಂಭೀರ ಗಾಯ | Janata news
ಬೆಂಗಳೂರು : ಕುಡಿದ ಮತ್ತಿನಲ್ಲಿ ಕಾಲೇಜ್ ಬಸ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ನಡೆದಿದೆ.
ಡೆಲ್ಲಿ ಪಬ್ಲಿಕ್ ಸ್ಕೂಲ್ನ ಬಸ್ ಚಾಲಕ ಕುಡಿದ ಅಮಲಿನಲ್ಲಿ ಬಸ್ ಚಲಾಯಿಸಿ ನಾಗಾರ್ಜುನ ಕಾಲೇಜ್ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ. ಕುಡಿದು ಬಸ್ ಚಲಾಯಿಸಿಕೊಂಡು ಬಂದ ಚಾಲಕ ಮೊದಲು ಬಾಗಲೂರು ಸಂತೆ ಬಳಿ ರಸ್ತೆ ಪಕ್ಕ ನಿಂತಿದ್ದ ನಾಗಾರ್ಜುನ ಕಾಲೇಜ್ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಮುಂದೆ ತೆರಳಿ ಟ್ರಾನ್ಸ್ ಫಾರ್ಮರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಿತೀಶ್ ಎಂಬ ವಿದ್ಯಾರ್ಥಿ ಕಾಲು ಮುರಿದಿದೆ. ಸಂಜಯ್ ಎಂಬ ವಿದ್ಯಾರ್ಥಿಗೆ ಆರು ಸ್ಟಿಚ್ ಹಾಕಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಎಸ್ಕೇಪ್ ಆಗಿದ್ದಾನೆ.