ಏರ್ ಷೋದಲ್ಲಿ ಬೆಂಕಿ, 300ಕ್ಕೂ ಹೆಚ್ಚು ಕಾರುಗಳು ಭಸ್ಮ: ಕಾರು ಮಾಲೀಕರಿಗೆ ನಗರ ಪೊಲೀಸ್ ಆಯುಕ್ತರ ಅಭಯ | Janata news
ಬೆಂಗಳೂರು : ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಸುಮಾರು 12.20ರ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, 300ಕ್ಕೂ ಹೆಚ್ಚು ವಾಹನಗಳು ಸುಟ್ಟು ಹೋಗಿವೆ.
ಬೆಂಕಿ ಅನಾಹುತದಲ್ಲಿ ಕಾರನ್ನು ಕಳೆದುಕೊಂಡಿರುವ ಮಾಲೀಕರ ಸಹಾಯಕ್ಕಾಗಿ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಸೂಕ್ತ ನೆರವು ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ತಿಳಿಸಿದ್ದಾರೆ.
ಸುಟ್ಟು ಹೋಗಿರುವ ಕಾರನ್ನು ಮಾಲೀಕರು ಪತ್ತೆ ಹಚ್ಚುತ್ತಿದ್ದಾರೆ. ಅವರ ನೆರವಾಗಿ 4 ಹೆಲ್ಪ್ ಡೆಸ್ಕ್ಗಳನ್ನು ತೆರೆದಿದ್ದೇವೆ. ಅವರು ಕಾರನ್ನು ಗುರುತಿಸಿ ನೋಂದಣಿ ಸಂಖ್ಯೆಯನ್ನು ನೀಡಿ ನಾಳೆ ಯಲಹಂಕ ಪೊಲೀಸ್ ಠಾಣೆಗೆ ಬಂದು ದಾಖಲೆ ನೀಡಿದರೆ ಪೊಲೀಸ್ ಇಲಾಖೆಯಿಂದ ನೀಡುವಂತಹ ದಾಖಲೆಗಳನ್ನು ಕೊಡಲಾಗುವುದು, ಆರ್ಟಿಒ ಅಧಿಕಾರಿಗಳು ಹಾಗೂ ನಮ್ಮ ಅಧಿಕಾರಿಗಳ ಸಹಯೋಗಯೊಂದಿಗೆ ಕಾರು ಮಾಲೀಕರಿಗೆ ತಮ್ಮ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ವಿಮಾ ಕಂಪನಿಗೆ ಬೇಕಾದ ದಾಖಲೆಗಳನ್ನು ನೀಡಲಾಗುವುದು ಎಂದಿದ್ದಾರೆ.