ಶಿರಾಡಿ ಘಾಟ್ನಲ್ಲಿ ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ | Janata news
ಹಾಸನ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಈ ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಬೆಂಗಳೂರಿನ ರಾಜನಕುಂಟೆ ಜಗದೀಶ್ (30), ಗೌರಮ್ಮ (45), ಚನ್ನಯ್ಯ (50), ಭುವನೇಶ್ (6) ಎಂದು ಗುರುತಿಸಲಾಗಿದೆ. ಭವ್ಯಾ (16), ನಾಗರಾಜ (38) ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಮೃತರು ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳುತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ 275ರ ಮಾರನಹಳ್ಳಿ ಸಮೀಪ KSRTC ಮತ್ತು ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಬಾಲಕ ಮತ್ತು ಮಹಿಳೆಯೂ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
English summary :Bus car accident!