ಹಾಸನ ಲೋಕೋಪಯೋಗಿ ಕಚೇರಿ ಮೇಲೂ ಐಟಿ ದಾಳಿ | Janata news
ಹಾಸನ : ಗುರುವಾರ ಬೆಳ್ಳಂಬೆಳಗ್ಗೆ ಮುಂಜಾನೆ 5.30ಕ್ಕೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ, ಸಚಿವ ಸಿಎಸ್ ಪುಟ್ಟರಾಜು, ಜೆಡಿಎಸ್ ಎಂಎಲ್ಸಿ ಬಿಎಂ ಫಾರೂಕ್ ಮತ್ತು ಇತರೆ 10 ಪ್ರಭಾವಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಮೂರು ಗುತ್ತಿಗೆದಾರರ ಮನೆಗಳ ಮೇಲೆ ಆದಾಯತೆರಿಗೆ ಅಧಿಕಾರಿಗಳ ದಾಳಿ. ಅಶ್ವತ್ಥ ನಾರಾಯಣ ಗೌಡ, ರಾಯಿ ಗೌಡ ಮತ್ತು ನಾರಾಯಣರೆಡ್ಡಿ ಇವರ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. ಹಾಸನದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಂಜುನಾಥ್ ಎಂಬುವರ ವಿಚಾರಣೆ ನಡೆಸಲಾಗಿದೆ.
ರಾಜ್ಯದ ಒಟ್ಟು 15 ಕಡೆಗಳಲ್ಲಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿಯಷ್ಟೇ ಸಿಎಂ ಕುಮಾರಸ್ವಾಮಿ, ತಮ್ಮ ವಿರುದ್ಧ ಕೇಂದ್ರ ಸರಕಾರ ಐಟಿ ದಾಳಿ ಮಾಡಿಸಲು ಸಂಚು ನಡೆಸಿದೆ ಎಂದಿದ್ದರು.