ಸಂಸದ ಶಿವರಾಮೇಗೌಡ ವಿರುದ್ಧ ಎಫ್ಐಆರ್ | Janata news
ಮಂಡ್ಯ : ಮಂಡ್ಯ ಕಾಂಗ್ರೆಸ್ ಸಂಸದ ಶಮವರಾಮೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಕೆ. ಕಬ್ಬಾಳಯ್ಯ ಅವರು ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.
ಸುಮಲತಾ ಅಂಬರೀಶ್, ದರ್ಶನ್, ರಾಕ್ಲೈನ್ ವೆಂಕಟೇಶ್ ಇವರೆಲ್ಲಾ ಗೌಡರಲ್ಲ, ಇವರೆಲ್ಲಾ ನಾಯ್ಡುಗಳು, ಮಂಡ್ಯವನ್ನು ನಾಯ್ಡುಗಳ ಕೈಗೆ ಕೊಡಬೇಡಿ ಎಂದಿದ್ದರು, ಕಾರ್ಯಕರ್ತರ ಸಭೆಯಲ್ಲಿ ನಾಯ್ಡು ಜನಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಜಾತಿನಿಂದನೆ ಮತ್ತು ಜಾತಿ-ಜಾತಿಗಳ ನಡುವೆ ಕೋಮುಗಲಭೆ ಸೃಷ್ಠಿಸುತ್ತಿರುವ ಆರೋಪ ಮಾಡಿದ್ದು, ಒಂದು ಜಾತಿಗೆ ಅವಮಾನ ಮಾಡಿ ಜಾತಿ ಜನಾಂಗಗಳ ನಡುವೆ ದ್ವೇಷ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕಬಾಳಯ್ಯ ಅವರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಚುನಾವಣಾಧಿಕಾರಿ ಸೂಚನೆಯಂತೆ ಪೀಪಲ್ ರೆಪ್ರೆಸೆಂಟೇಶನ್ ಆಕ್ಟ್ ಸೆಕ್ಷನ್ 125 ಪ್ರಕಾರ ಶಿವರಾಮೇಗೌಡ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.