ಮಂಡ್ಯದಲ್ಲಿ ಸುಮಲತಾ ಸ್ವಾಭಿಮಾನಿ ಸಮಾವೇಶ, ರೋಡ್ ಶೋನಲ್ಲಿ ಜನಜಾತ್ರೆ | Janata news
ಮಂಡ್ಯ : ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಈಗಾಗಲೇ ಸಾವಿರಾರು ಮಂದಿ ಜನರು ಸಮಾವೇಶದಲ್ಲಿ ಭಾಗವಹಿಸಲು ನೆರದಿದ್ದಾರೆ. ಮಂಡ್ಯದ ಕಾಳಿಕಾಂಬಾ ದೇವಾಲಯದ ಬಳಿ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಸಮಾವೇಶಕ್ಕೆ ಸ್ವಾಭಿಮಾನಿಗಳ ಸಮ್ಮಿಲನ ಎಂದು ನಾಮಕರಣ ಮಾಡಲಾಗಿದೆ.
ಇಷ್ಟು ದಿನ ಪ್ರಚಾರದಲ್ಲಿ ಸುಮಲತಾ ಅವರಿಗೆ ಸಾಥ್ ನೀಡಿದ್ದ ಯಶ್ ಮತ್ತು ದರ್ಶನ್ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಮಾವೇಶಕ್ಕೆ ಈಗಾಗಲೇ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಕಹಳೆಗಳು ಎಲ್ಲೆಡೆ ಕಾಣುತ್ತಿವೆ. ಸುಮಲತಾ, ದರ್ಶನ್, ಯಶ್, ಅಭಿಷೇಕ್, ರಾಕ್ಲೈನ್ ವೆಂಕಟೇಶ್ ಕೆಲವು ಕಾಂಗ್ರೆಸ್ ಮುಖಂಡರು, ಬಿಜೆಪಿ ಸ್ಥಳೀಯ ಮುಖಂಡರು ಮೆರವಣಿಗೆಯಲ್ಲಿ ವೇದಿಕೆಗೆ ಆಗಮಿಸಿದ್ದಾರೆ.
ಇಂದು ಲೋಕಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಐದು ಗಂಟೆಗೆ ಬಹಿರಂಗ ಸಮಾವೇಶ ಅಂತ್ಯವಾಗಲಿದ್ದು, ಹೀಗಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಬಹಿರಂಗ ಸಮಾವೇಶಕ್ಕೆ ಅಪಾರ ಸಂಖ್ಯೆಯ ಜನಸಾಗರವೇ ಹರಿದು ಬರುತ್ತಿದೆ.