ಬೆಂಗಳೂರಿನಲ್ಲಿ ಅಡುಗೆ ಸಿಲೆಂಡರ್ ಸ್ಪೋಟ, ಮೂವರು ಸಾವು | Janata news
ಬೆಂಗಳೂರು : ಅಡುಗೆ ಸಿಲೆಂಡರ್ ಸ್ಪೋಟಗೊಂಡ ಪರಿಣಾಮ ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೆಂಗಳೂರಿನ ಬಾಣಸವಾಡಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಈ ವಿಷಯ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಅಡುಗೆ ಮಾಡುವ ಸಮಯದಲ್ಲಿ ಸಿಲೆಂಡರ್ ಸ್ಪೋಟಗೊಂಡಿದ್ದು, ನಾಲ್ವರು ಗಾಯಗೊಂಡಿದ್ದರು ಎನ್ನಲಾಗಿದೆ. ನಾಲ್ವರು ಬಿಹಾರ ಮೂಲದ ವ್ಯಕ್ತಿಗಳು ಗಾಯಗೊಂಡಿದ್ದರು, ಗಾಯಗೊಂಡಿದ್ದವರನ್ನು ವಿಕ್ಟೋರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆಯೇ ಮೂವರು ಸಾವನ್ನಪ್ಪಿದ್ದು, ಇನ್ನೊಬ್ಬರ ಸ್ಥಿತಿ ಕೂಡ ಗಂಭಿರವಾಗಿದೆ ಎನ್ನಲಾಗಿದೆ. ಪ್ರಕರಣ ಬಾಣವಾಸವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
English summary :Cylinder blast