ನೀರಿನ ಟ್ಯಾಂಕರ್ ಲಾರಿ-ಬೈಕ್ ಮುಖಾಮುಖಿ ಡಿಕ್ಕಿ : ಅಣ್ಣ-ತಂಗಿ ಸಾವು | Janata news
ಚಿಕ್ಕಮಗಳೂರು : ನೀರಿನ ಟ್ಯಾಂಕರ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಅಣ್ಣ, ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಳೆ ಲಕ್ಯಾ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಲತಾ ಮಣಿ (25) ಹಾಗೂ ಅಶೋಕ್ (30) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಗುವಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಡೂರಿನ ಎಸ್ ಬಿದರೆ ಗ್ರಾಮದಿಂದ ಚಿಕ್ಕಮಗಳೂರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಸಾವನ್ನಪ್ಪಿದವರು ಕಡೂರಿನ ಎಸ್. ಬಿದರೆ ಗ್ರಾಮದವರು ಎಂದು ತಿಳಿದು ಬಂದಿದೆ.
ಲಕ್ಯಾ ಗ್ರಾಮದ ಪಾಂಡು ಎಂಬುವರಿಗೆ ಸೇರಿದ ಟ್ಯಾಂಕರ್ ಲಾರಿ ಇದಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.