ಕೆಎಸ್ಆರ್ಟಿಸಿ ಬಸ್-ಆಟೋ ನಡುವೆ ಡಿಕ್ಕಿ, ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋಗುತ್ತಿದ್ದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ! | Janata news
ತುಮಕೂರು : ತುಮಕೂರು ಜಿಲ್ಲೆ ಮಲ್ಲಸಂದ್ರ ಗ್ರಾಮದ ಬಳಿಯಲ್ಲಿ ಸರಕಾರಿ ಬಸ್ ಹಾಗೂ ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಗುರುವಾರ ಬಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಹರೀಶ್ (37) ಪ್ರಯಾಣಿಕರಾದ ವೃದ್ಧ ದಂಪತಿ ಬಸವರಾಜು (67), ಗಂಗಾಂಬಿಕಾ (71) ಸೇರಿದಂತೆ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ನಾಲ್ವರು ಕೂಡು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ಮತ್ತಿಘಟ್ಟ ನಿವಾಸಿಗಳಾಗಿದ್ದಾರೆ ಎನ್ನಲಾಗಿದೆ. ಮೃತ ಪ್ರಯಾಣಿಕರು ಚಿಕಿತ್ಸೆ ಪಡೆಯಲು ತುಮಕೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ.
ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.