ಅತೃಪ್ತ ಶಾಸಕರ ದಂಡು ವಿಧಾನಸೌಧದ ಸ್ಪೀಕರ್ ಕಚೇರಿಯತ್ತ! ಮೈತ್ರಿ ಸರ್ಕಾರಕ್ಕೆ ಕೌಂಟ್ಡೌನ್ ಶುರು ನಾ ? | Janata news
ಬೆಂಗಳೂರು : ದೋಸ್ತಿ ಸರ್ಕಾರದಲ್ಲಿ ಇಂದು 11 ಮಂದಿ ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಸಲ್ಲಿಕೆಯ ಸ್ವೀಕೃತಿ ಪತ್ರವನ್ನು ಪಡೆದುಕೊಂಡಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಶಾಸಕರು ರಾಜಭವನಕ್ಕೆ ತೆರಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಮನವೊಲಿಕೆಗೆ ಒಪ್ಪದ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಮಹೇಶ್ ಕುಮಠಳ್ಳಿ, ಎಚ್. ವಿಶ್ವನಾಥ್ ಸೇರಿ ಒಟ್ಟು 11 ಶಾಸಕರು ರಾಜಭವನಕ್ಕೆ ತೆರಳಿದ್ದಾರೆ. ಆದರೆ ರಾಮಲಿಂಗಾರೆಡ್ಡಿ, ಭೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್ ಮತ್ತು ಮುನಿರತ್ನ ಸ್ಪೀಕರ್ ಕಚೇರಿಯಲ್ಲೇ ಉಳಿದಿದ್ದು, ಡಿ.ಕೆ. ಶಿವಕುಮಾರ್ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಡಿಕೆಶಿ ಹೈಕಮಾಂಡ್ ಸೂಚನೆ ಮೇರೆಗೆ ಅತೃಪ್ತರ ಮನವೊಲಿಸಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದರು. ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ.