ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಮಂತ್ರಿಮಂಡಲ ರಚನೆಗೆ ವಿಳಂಭದ ಕುರಿತು ಸಿದ್ದರಾಮಯ್ಯ ಪ್ರಶ್ನೆ | Janata news
ಬೆಂಗಳೂರು : ಕಳೆದ ವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಅವರು ಇನ್ನೂ ಮಂತ್ರಿಮಂಡಲ ರಚನೆ ಮಾಡಲು ವಿಳಂಭವಾಗುತ್ತಿರುವುದು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಈ ಕುರಿತು ಟ್ವೀಟ್ ಮಾಡಿ ಬಿ.ಎಸ್.ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 8 ದಿನಗಳು ಕಳೆದಿವೆ. ಇನ್ನೂ ಸಹ ಮಂತ್ರಿಮಂಡಲ ರಚನೆಯೇಯಾಗಿಲ್ಲ. ರಚನೆಯಾಗುವಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಏಕಚಕ್ರಾಧಿಪತ್ಯ ಸಾಮ್ರಾಜ್ಯವನ್ನು ಅವರಿನ್ನೂ ಬಹಳ ದಿನಗಳ ಕಾಲ ಮುಂದುವರಿಸುವ ಮೂಡ್ನಲ್ಲಿದ್ದಂತೆ ಕಾಣುತ್ತಿದೆ. ರಾಜ್ಯದಲ್ಲಿ ಆಡಳಿತ ಇನ್ನೂ ಪ್ರಾರಂಭವೇ ಆಗಿಲ್ಲ, ಎಂದು ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಕುರಿತು ಟ್ವೀಟ್ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್.ವೈ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಖಾರವಾಗಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು @BSYBJP ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?@INCKarnataka
— Siddaramaiah (@siddaramaiah) August 3, 2019
1/3
@BSYBJP, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ೮ ದಿನಗಳು ಕಳೆದಿವೆ. ಇನ್ನೂ ಸಹ ಮಂತ್ರಿಮಂಡಲ ರಚನೆಯೇಯಾಗಿಲ್ಲ.
— Dinesh Gundu Rao / ದಿನೇಶ್ ಗುಂಡೂರಾವ್ (@dineshgrao) August 3, 2019
ರಚನೆಯಾಗುವಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
ಈ ಏಕಚಕ್ರಾಧಿಪತ್ಯ ಸಾಮ್ರಾಜ್ಯವನ್ನು ಅವರಿನ್ನೂ ಬಹಳ ದಿನಗಳ ಕಾಲ ಮುಂದುವರಿಸುವ ಮೂಡ್ನಲ್ಲಿದ್ದಂತೆ ಕಾಣುತ್ತಿದೆ.
ರಾಜ್ಯದಲ್ಲಿ ಆಡಳಿತ ಇನ್ನೂ ಪ್ರಾರಂಭವೇ ಆಗಿಲ್ಲ.