ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ತನಿಖೆ ಬೇಕದಾರೂ ನಡೆಸಲಿ: ಸಿದ್ದರಾಮಯ್ಯ | Janata news
ಚಾಮರಾಜನಗರ : ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಸಿಬಿಐ ಏಕೆ ಯಾವುದೇ ಸಂಸ್ಥೆ ಮೂಲಕ ತನಿಖೆ ನಡೆಸಲಿ ನನ್ನ ಅಭ್ಯಂತರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಕನಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಈ ಪ್ರಕರಣದ ತನಿಖೆಯನ್ನು ಯಾವುದಕ್ಕಾದರೂ ವಹಿಸಲಿ, ಈ ಪ್ರಕರಣದಲ್ಲಿ ಯಡಿಯೂರಪ್ಪ ಇದ್ದಾರೆ. ಯಡಿಯೂರಪ್ಪ ರಾಜ್ಯ ಕಂಡ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್. ಪ್ರವಾಹ ಪರಿಹಾರಕ್ಕೆ ಕೇಂದ್ರಕ್ಕೆ ಸರ್ವಪಕ್ಷ ಕರೆದೊಯ್ಯುವಲ್ಲಿ ವಿಫಲವಾಗಿದೆ. ಸರ್ವಪಕ್ಷ ಕರೆದೊಯ್ಯಲು ನಾವು ಒತ್ತಾಯ ಮಾಡುವುದಲ್ಲ. ಅದು ಮುಖ್ಯಮಂತ್ರಿ ಜವಾಬ್ದಾರಿ. ಆಗದಿದ್ದರೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ಆದ್ಯತೆ ಏನೆಂಬುದೇ ಅರ್ಥ ಆಗುತ್ತಿಲ್ಲ. ಮೋದಿ ಉದ್ದುದ್ದ ಭಾಷಣ ಬಿಗಿಯುತ್ತಾ ವಿದೇಶ ಸುತ್ತುತ್ತಿದ್ದಾರೆ. ನೆರೆ ಸಂತ್ರಸ್ತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಹರಿಹಾಯ್ದರು .