ಲಾರಿ ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂರು ಸಾವು | Janata news
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಸುಕಿನಲ್ಲಿ ದುರ್ಘಟನೆ ನಡೆದಿದೆ. ಇಂದು ನಸುಕಿನ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದು, ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಚಾಲಕ ಬಿಜಾಪುರ ಮೂಲದ ಪ್ರವೀಣ್(36), ಬೆಂಗಳೂರಿನ ವಿಜಯ್ ಕುಮಾರ್(37) ಮೃತರು. ಮೃತ ಮಹಿಳೆಯ ಹೆಸರು ಇನ್ನೂ ತಿಳಿದುಬಂದಿಲ್ಲ.
ಸರಕು ತುಂಬಿದ್ದ ಲಾರಿಯೊಂದು ಹಿರಿಯೂರಿನಿಂದ ಚಳ್ಳಕೆರೆಗೆ ಪ್ರಯಾಣ ಬೆಳೆಸಿತ್ತು, ಹಿಂದಿನಿಂದ ವೇಗವಾಗಿ ಬಂದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ನುಜ್ಜುಗುಜ್ಜಾಗಿದೆ.