ಪಿ.ಚಿದಂಬರಂ ರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿದ ಜಾರಿ ನಿರ್ದೇಶನಾಲಯ : ಐಎನ್ಎಕ್ಸ್ ಪ್ರಕರಣ | Janata news
ನವದೆಹಲಿ : ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಾಜಿ ಕೇಂದ್ರ ಸಚಿವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಪಿ ಚಿದಂಬರಂ ವಿಚಾರಣೆ ನಡೆಸಿದ ನಂತರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಳಿಗ್ಗೆ ಜೈಲಿಗೆ ಆಗಮಿಸಿದ ಕೇಂದ್ರ ಏಜೆನ್ಸಿಯ ತನಿಖಾಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ಆವರಣದಲ್ಲಿದ್ದರು. ಅವರು ಸಂಕ್ಷಿಪ್ತವಾಗಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ನಂತರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಿದ್ದಾರೆ.
ಚಿದಂಬರಂ ಅವರ ಪತ್ನಿ ನಳಿನಿ ಮತ್ತು ಮಗ ಕಾರ್ತಿ ಚಿದಂಬರಂ ಕೂಡ ಬೆಳಿಗ್ಗೆ ಜೈಲಿನ ಆವರಣದಲ್ಲಿ ಅವರನ್ನು ಭೇಟಿ ಮಾಡಿದರು. ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಕ್ಟೋಬರ್ 17 ರವರೆಗೆ ಹಿರಿಯ ಕಾಂಗ್ರೆಸ್ ಮುಖಂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.