ನಳಿನ್ ಕುಮಾರ್ ಗೆ ಕನಿಷ್ಟ ಜ್ಞಾನ ಕೂಡ ಇಲ್ಲ: ಸಿದ್ದರಾಮಯ್ಯ | Janata news
ಮಂಗಳೂರು : ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಅವರ ಬಗ್ಗೆ ಟೀಕಿಸಿದರು. ಇನ್ನು ಡಿಸೆಂಬರ್ ವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉಳಿದರೆ ಅದೇ ಹೆಚ್ಚು. ಡಿಸೆಂಬರ್ ಬಳಿಕ ರಾಜ್ಯದಲ್ಲಿ ಚುನಾವಣೆ ನಡೆಯುವುದು ಖಚಿತ ಎಂದು ಭವಿಷ್ಯ ನುಡಿದರು.
ನಳಿನ್ ಕುಮಾರ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ, ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸ್ವಿಚ್ ಆನ್ ಮಾಡಿದ್ರೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕುಣಿಯುತ್ತಾರೆ. ಬಿ.ಎಲ್.ಸಂತೋಷ್ ರಿಮೋಟ್ ಮೂಲಕ ಕೆಲಸ ಮಾಡಿಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.