ಸ್ವಾತಂತ್ರ್ಯಕ್ಕಾಗಿ ಸಿದ್ದರಾಮಯ್ಯ ಅವರ ಕುಟುಂಬದವರು ಯಾರೂ ಸತ್ತಿಲ್ಲ: ವಿಶ್ವನಾಥ್ | Janata news
ಹುಬ್ಬಳ್ಳಿ : ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ. ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು,ನನ್ನ ಕುಟುಂಬ, ಸಿದ್ಧರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ. ನಮ್ಮ ಆಸ್ತಿಯೂ ಹೋಗಿಲ್ಲ, ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ನಾವು ಉಣ್ಣುತ್ತಿದ್ದೇವೆ ಎಂದು ಅವರು ತಿರುಗೇಟು ನೀಡಿದರು.
ನಾಳೆ ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪರ ತೀರ್ಪು ಬರುವ ನಂಬಿಕೆ ,ವಿಶ್ವಾಸವಿದೆ. ಏಕೆಂದರೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಕಾನೂನು ಬಾಹಿರ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿಗೆ ಮೊರೆ ಹೋಗಿದ್ದೇವೆ. ಕೋರ್ಟ್ ನಮ್ಮ ವಾದವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.