ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ: ವಿಶ್ವನಾಥ್ | Janata news
ಬೆಂಗಳೂರು : ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ. ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲ. ಸಿದ್ದರಾಮಯ್ಯ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ನಾನೇ ಏನಾದ್ರೂ ಕೇಳಿದ್ರೆ ಕೆಲಸ ಆಗ್ತಾ ಇರಲಿಲ್ಲ. ನಿಮ್ಮ ಪಕ್ಷದ ಶಾಸಕರನ್ನೇ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಹೆಚ್ಡಿಕೆ ವಿರುದ್ಧ ಕಿಡಿಕಾರಿದರು.
English summary :HDKumaraswamy and Siddaramaiah