ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಛೇರಿ ಉದ್ಘಾಟಿಸಿದ ಉಪ ಮು.ಮ. ಅಶ್ವತ್ ನಾರಾಯಣ | Janata news
ಚಿಕ್ಕಬಳ್ಳಾಪುರ : ಜಿಲ್ಲಾ ವಸ್ತುವಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಛೇರಿಯನ್ನು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಅವರು ಜಿಲ್ಲೆಯ ಇತರೆ ಇಲಾಖೆಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳ, ನೀರಿನ ಸಮರ್ಪಕ ನಿರ್ವಹಣೆ, ಕೃಷಿ ಸಂಬಂಧಿತ ಚಟುವಟಿಕೆಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು, ಎಂದು ಹೇಳಿದರು.
ಇದಕ್ಕೂ ಮೊದಲು ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಸಮರ್ಪಕ ನಿರ್ವಹಣೆ ಬಗ್ಗೆ ಜಿಲ್ಲಾಡಳಿತದೊಂದಿಗೆ ಖಾಸಗಿ ರೆಸಾರ್ಟ್ ಆದ. ಡಿಸ್ಕವರಿ ವಿಲೇಜ್ ನಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನಂದಿಬೆಟ್ಟದ ಕಲ್ಯಾಣಿ, ದೇವಸ್ಥಾನಗಳ ಅಭಿವೃದ್ಧಿ, ಜೀವ ವೈವಿಧ್ಯದ ಸಂರಕ್ಷಣೆ, ವಾರಾಂತ್ಯದಲ್ಲಿ ವಾಹನಗಳ ಒತ್ತಡದಿಂದಾಗಿ ಆಗುವ ಸವಾಲುಗಳನ್ನು ನಿರ್ವಹಿಸಲು ಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಿದರು.