ಬಡವರಿಗೆ ಸೇರ್ಬೇಕಿದ್ದ ಪಡಿತರ ಅಕ್ಕಿ ಗೋಡಾನ್ ಮೇಲೆ ಪೊಲೀಸರ ದಾಳಿ: 60 ಟನ್ ಪಡಿತರ ವಶ !! | Janata news
ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾ. ಕೋನಾಪುರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬಾರಿ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ವಶ ರಾಂಪುರ ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಗೋಡಾನ್ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 60 ಟನ್ ನಷ್ಟು ಅಕ್ರಮ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಗೋಡಾನ್ ನಲ್ಲಿ ಬಿಸಿಯೂಟ ಹಾಗೂ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿರುವ ಮಾಹಿತಿ ಆಧರಿಸಿ ತಹಶೀಲ್ದಾರ್ ಬಸವರಾಜ್ ಹಾಗೂ ಮೊಳಕಾಲ್ಮೂರು ಪಿಎಸ್ಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಪ್ರಕರಣ ಸಂಬಂಧ ಆರೋಪಿಗಳಾದ ಚಿದಾನಂದಪ್ಪ, ಸಣ್ಣ ಮಾರಣ್ಣ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ರಾಂಪೂರದಿಂದ ಬೆಂಗಳೂರು ಕಡೆಗೆ ಅಕ್ರಮ ಅಕ್ಕಿ ಸಾಗಾಟದ ಶಂಕೆ ವ್ಯಕ್ತವಾಗಿದೆ.