ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್, ಮರಕ್ಕೆ ಡಿಕ್ಕಿ, ಶಿಕ್ಷಕ ಸಾವು! | Janata news
ಶಿವಮೊಗ್ಗ : ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಮರಕ್ಕೆ ಡಿಕ್ಕಿ ಹೊಡೆದು ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ.
ಹರಿಕೃಷ್ಣ(45) ಮೃತ ಶಿಕ್ಷಕ. ಭದ್ರಾವತಿ ತಾಲೂಕಿ ಮಾರಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ ಪ್ರೌಢಶಾಲೆಯ 30 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು.
ಡಿ.24ರ ಮಂಗಳವಾರ ರಾತ್ರಿ ಪ್ರವಾಸ ಮುಗಿಸಿ ವಾಪಸ್ ಬಂದಿದ್ದರು. ಮಾರಶೆಟ್ಟಿಹಳ್ಳಿಯಲ್ಲಿ ಕೆಲ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಇಬ್ಬರು ವಿದ್ಯಾರ್ಥಿಗಳನ್ನು ಅರಬಿಳಚಿ ಗ್ರಾಮಕ್ಕೆ ಇಳಿಸಿ ಬಸ್ ವಾಪಸ್ ಹೋಗುತ್ತಿತ್ತು. ಆದರೆ ಬಸ್ ಅರಬಿಳಚಿ ಹಾಗೂ ಕಲ್ಲಿಹಾಳ್ ರಸ್ತೆ ಮಧ್ಯೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ಬಸ್ನಲ್ಲಿದ್ದ ಶಾಲೆಯ ದೈಹಿಕ ಶಿಕ್ಷಕ ಹರಿಕೃಷ್ಣ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.