ರಶ್ಮಿಕಾ ಮಂದಣ್ಣಗೆ ಐಟಿ ನೋಟಿಸ್: ಜ.21ರಂದು ವಿಚಾರಣೆಗೆ ಹಾಜರಾಗಲು ಸೂಚನೆ! | Janata news
ಬೆಂಗಳೂರು : ಕೊಡಗು ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರೀಶಿಲನೆ ನಡೆಸಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ.
ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಮಾಡಿದ್ದು, ಬೆಂಗಳೂರಿನಲ್ಲಿರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದ ರಶ್ಮಿಕಾ ಮಂದಣ್ಣ, ನಂತರ ಟಾಲಿವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡರು. ಆಫರ್ಗಳು ಹೆಚ್ಚಿದಂತೆ ಅವರ ಸಂಭಾವನೆಯೂ ಹೆಚ್ಚಿದೆ. ಈ ಕಾರಣಕ್ಕೆ ಐಟಿ ದಾಳಿ ನಡೆದಿದೆ ಎನ್ನಲಾಗಿತ್ತು. ಶೋಧ ಕಾರ್ಯ ಪೂರ್ಣಗೊಂಡಿದ್ದು, ಐಟಿ ನೋಟಿಸ್ ನೀಡಿದೆ.
ಐಟಿ ದಾಳಿ ಬಳಿಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4 ಬಾಕ್ಸ್ ದಾಖಲೆ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಒಂದು ಸೂಟ್ಕೇಸ್, ಎರಡು ಬ್ಯಾಗ್ ಮತ್ತೊಂದು ವೈಟ್ ಬಾಕ್ಸ್ನಲ್ಲಿ ಐಟಿ ಅಧಿಕಾರಿಗಳು ದಾಖಲೆ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ.
ಭಾರೀ ಪ್ರಮಾಣದ ಆಸ್ತಿ ಹೊಂದಿದ್ದ ಆರೋಪದ ಮೇಲೆಯೇ ಐಟಿ ಅಧಿಕಾರಿಗಳು ಸತತವಾಗಿ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಕ್ಲೂರು ಗ್ರಾಮದಲ್ಲಿರುವ ರಶ್ಮಿಕಾ ಮಂದಣ್ಣ ಅವರ ನಿವಾಸ, ಕಚೇರಿ, ಕಲ್ಯಾಣಮಂಟಪ ಸೇರಿದಂತೆ ಮತ್ತಿತರ ಕಡೆ ಆದಾಯ ತೆರಿಗೆ ಅಧಿಕಾರಿಗಳ ಎರಡು ತಂಡ ದಾಳಿ ನಡೆಸಿತ್ತು. ಕುಕ್ಲೂರಿನ ಮನೆ, ಸೆರೆನಿಟಿ ಹಾಲ್ ಸೇರಿದಂತೆ ರಶ್ಮಿಕಾ ತಂದೆ ಮದನ್ ಮಂದಣ್ಣಗೆ ಸೇರಿದ ಕಾಫಿ ಎಸ್ಟೇಟ್ ಮತ್ತಿತರ ಕಡೆಯೂ ಅಧಿಕಾರಿಗಳು ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಪಾಸ್ತಿ ಪತ್ತೆ ಮಾಡಿದ್ದರು ಎನ್ನಲಾಗಿದೆ.
ರಶ್ಮಿಕಾ ಮಂದಣ್ಣ ಕುಟುಂಬದ ಬಳಿ ಇರುವ ಆಸ್ತಿ ಎಷ್ಟು?
- ಕೊಡಗಿನ ವೀರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿ ಎರಡು ಅಂತಸ್ತಿನ ಕೋಟಿ ರೂ, ಮೌಲ್ಯದ ಐಷಾರಾಮಿ ಕಟ್ಟಡ ಇದೆ.
- ಜೊತೆಗೆ ಎರಡು ಐಷಾರಾಮಿ ಕಾರುಗಳನ್ನು ರಶ್ಮಿಕಾ ತಂದೆ ಮದನ್ ಮಂದಣ್ಣ ಹೊಂದಿದ್ದಾರೆ.
- ನಟಿ ರಶ್ಮಿಕಾ ಮಂದಣ್ಣ ಹುಟ್ಟಿದ ಊರು ವೀರಾಜಪೇಟೆ ಸಮೀಪದ ಮೈತಾಡಿ ಗ್ರಾಮದಲ್ಲಿ 24 ಎಕರೆ ಕಾಫಿ ತೋಟ ಹೊಂದಿದ್ದಾರೆ.
- ಬಿಟ್ಟಂಗಾಲದಲ್ಲಿ 5.50 ಎಕರೆ ಜಾಗವನ್ನು ಸದ್ಯ ಖರೀದಿ ಮಾಡಿದ್ದರು. (ಪೆಟ್ರೋಲ್ ಬಂಕ್ ಹಾಗೂ ಶಾಲೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದರು ಎನ್ನಲಾಗಿದೆ)
- ವಿರಾಜಪೇಟೆಯಲ್ಲಿ ಐಷಾರಾಮಿ ಕಲ್ಯಾಣ ಮಂಟಪ ಸೆರಿನಿಟ್ ಹಾಲ್ ಹೊಂದಿದ್ದು, ಇಲ್ಲಿ ಒಂದು ಮದುವೆಗೆ ದಿನಕ್ಕೆ ಒಂದುವರೆ ಲಕ್ಷ ರೂ, ಬಾಡಿಗೆ ವಿಧಿಸಲಾಗುತ್ತದೆ.