ನಿತ್ಯಾನಂದ ಪತ್ತೆಗೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ | Janata news
ಬೆಂಗಳೂರು : ನಿತ್ಯಾನಂದನ ಪತ್ತೆಗೆ ಇಂಟರ್ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಸಾಮಾನ್ಯವಾಗಿ ಈ ಬ್ಲೂ ಕಾರ್ನರ್ ನೋಟಿಸ್ ಅನ್ನು ನಾಪತ್ತೆಯಾದ, ಗುರುತು ಪತ್ತೆಯಾದ ಅಥವಾ ಪತ್ತೆಯಾಗದ ಅಪರಾಧಿಗಳು ಮತ್ತು ಸಾಮಾನ್ಯ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿರುವ ಅಪರಾಧಿಗಳ ವಿರುದ್ಧ ಹೊರಡಿಸಲಾಗುತ್ತದೆ.
ಬಿಡದಿ ಬಳಿಯ ಆಶ್ರಮದಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಡದಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಗೆ ನಿತ್ಯಾನಂದ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಆತನ ಬಂಧನಕ್ಕೆ ವಾರೆಂಟ್ ಜಾರಿ ಮಾಡಿತ್ತು. ಹೀಗಾಗಿ ಆತ ಪಾಸ್ಪೋರ್ಟ್ ಇಲ್ಲದೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ.
ಗುಜರಾತ್ನ ಅಹಮದಾಬಾದ್ ನಲ್ಲಿರುವ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದಲ್ಲಿನ ನಾಲ್ಕು ವಿದ್ಯಾರ್ಥಿಗಳ ಅಪಹರಣ ಹಾಗೂ ಅವರನ್ನು ಆಶ್ರಮಕ್ಕೆ ದೇಣಿಗೆ ಸಂಗ್ರಹಿಸಲು ಬಳಸಿಕೊಂಡ ಆರೋಪದ ಮೇಲೆ ನಿತ್ಯಾನಂದ ವಿರುದ್ಧ ಗುಜರಾತ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದೇ ವಿಚಾರವಾಗಿ ಗುಜರಾತ್ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದ್ದರು.