ಕಟೀಲಮ್ಮನ ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಶಿಲ್ಪಾ ಶೆಟ್ಟಿ ಭಾಗಿ! | Janata news
ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿ ಕಟೀಲು ಶ್ರೀ ದೇವಿಯ ದರ್ಶನ ಪಡೆದರು.
ದರ್ಶನ ಪಡೆದ ಬಳಿಕ ಮಾತನಾಡಿದ ಶಿಲ್ಪಾ ಶೆಟ್ಟಿ, ಕ್ಷೇತ್ರಕ್ಕೆ ಬರಬೇಕು ಎಂದು ತುಂಬಾ ಆಸೆ ಇತ್ತು. ಕಟೀಲು ದೇವರ ಅನುಗ್ರಹದಿಂದ ನಾನು ಇಷ್ಟೇಲ್ಲ ಸಾಧನೆ ಮಾಡಲು ಸಾಧ್ಯವಾಯಿತು. ಹಾಗಾಗಿ ಬ್ರಹ್ಮಕಲಶದ ಈ ಸಂದರ್ಭದಲ್ಲಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದು ಮಾತೃ ಭಾಷೆ ತುಳುವಿನಲ್ಲಿ ಮಾತನಾಡಿದರು. ನಂತರ ಕಟೀಲು ಕ್ಷೇತ್ರದವತಿಯಿಂದ ನಟಿ ಶಿಲ್ಪಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
English summary :Shilpa Shetty, Mangalore