ಮೈಸೂರು ಜಿ.ಪಂ ಅಧ್ಯಕ್ಷರ ಕಾರು ಚಾಲಕ ಹತ್ಯೆ: ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ! | Janata news
ಮೈಸೂರು : ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ ಅವರ ಕಾರಿನ ಚಾಲಕ ಸುನಿಲ್ (25) ಅವರನ್ನು ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಮಚ್ಚಿನಿಂದ ಹೊಡೆದು ಶನಿವಾರ ರಾತ್ರಿ ಕೊಲೆ ಮಾಡಲಾಗಿತ್ತು.
ಸದ್ಯ ಆರೋಪಿ ರವಿ, ಸುನೀಲ್ ಮೇಲೆ ಮಚ್ಚಿನಿಂದ ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿರುವುದು ಬೆಳಕಿಗೆ ಬಂದಿದೆ.
ಎರಡು ದಿನಗಳ ಹಿಂದೆ ಹಲ್ಲೆಗೊಳಗಾದ ಸುನೀಲ್, ನಿನ್ನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ. ಇವರ ನೆರೆಮನೆಯಲ್ಲಿ ವಾಸವಿದ್ದ ಆರೋಪಿ ರವಿ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹೆಚ್.ಡಿ ಕೋಟೆ ತಾಲೂಕಿನ ಅಂತರಸಂತೆಯ ಬೇಕರಿಯಲ್ಲಿ ಸುನೀಲ್ ಇದ್ದಾಗ, ಅವರ ದಾಯಾದಿ ರವಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಸ್ಥಳದಿಂದ ಓಡಿ ಹೋಗಿದ್ದ. ಬೇಕರಿ ಮುಂಭಾಗದಲ್ಲಿ ನಡೆದ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅನೈತಿಕ ಸಂಬಂಧದ ಕಾರಣಕ್ಕೆ ಸುನಿಲ್ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.