ಬೆಂಗಳೂರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ಘೋಷಿಸಿದ ಸಿಎಂ ಯಡಿಯೂರಪ್ಪ! | Janata news
ಬೆಂಗಳೂರು : ಸಿಲಿಕಾನ್ ಸಿಟಿಗಾಗಿ ಸಿಎಂ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8772 ಕೋಟಿ ರೂ. ಅನುದಾನವನ್ನು ತೆಗೆದಿಡಲಾಗಿದೆ.
ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ಬಜೆಟ್ನಲ್ಲಿ ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 8772 ಕೋಟಿ ರೂ.ಗಳನ್ನು ಮೀಸಲಾಗಿಡಲಾಗಿದೆ ಎಂದು ಹೇಳಿದರು. ಬೆಂಗಳೂರು ನಗರದ ಸಬ್ ಅರ್ಬನ್ ರೈಲಿಗೆ 500 ಕೋಟಿ ರೂ.ಗಳನ್ನು ಘೋಷಣೆ ಮಾಡಿದರು.
* ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ 100 ಕೋಟಿ, ಶುಭ್ರ ಬೆಂಗಳೂರು ಯೋಜನೆಗೆ 900 ಕೋಟಿ ಮೀಸಲಾಗಿಡಲಾಗಿದೆ.
* ಆನಂದರಾವ್ ವೃತ್ತದ ಬಳಿ ಬಹುಮಹಡಿ ಕಟ್ಟಡದ ಮಾದರಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಕಡೆ ಇರುವಂತೆ ಬಹುಹಂತದ ಕಟ್ಟಡ ನಿರ್ಮಾಣ.
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 600 ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, 1500 ಹೊಸ ಬಸ್ ಖರೀದಿ ಮಾಡಲಾಗುತ್ತದೆ.
* ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಏರ್ ಪೋರ್ಟ್ಗೆ ಔಟರ್ ರಿಂಗ್ ರೋಡ್ ನಿರ್ಮಾಣಕ್ಕೆ 14,500 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಈ ರಸ್ತೆ 56 ಕಿ. ಮೀ. ಉದ್ದದ ರಸ್ತೆಯಾಗಿದೆ.
* ಬೆಂಗಳೂರು ನಗರದ 4 ಕಡೆ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಲಾಗುತ್ತದೆ
* ಬೆಂಗಳೂರಿನಲ್ಲಿ ಚಿತ್ರನಗರಿ ಸ್ಥಾಪನೆಗೆ 500 ಕೋಟಿ. ಬೆಂಗಳೂರು ವಿಮಾನ ನಿಲ್ದಾಣದ ಬಳಿ 100 ಅಡಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕಾಗಿ 66 ಕೋಟಿ ಅನುದಾನ.
* ಬೆಂಗಳೂರಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆಗೆ 30 ಲಕ್ಷ ಅನುದಾನ
* ಬೆಂಗಳೂರು ನಗರಕ್ಕೆ ಭವಿಷ್ಯದ ಯೋಜನೆಯೊಂದನ್ನು ಪ್ರಕಟಿಸಿರುವ ಬಿಎಸ್ವೈ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಘೋಷಿಸಿದ್ದಾರೆ. ಮೆಟ್ರೋ ಮತ್ತು ಬಿಎಂಟಿಸಿ ನಿಲ್ದಾಣಗಳಿಗೆ ಸಂಪರ್ಕ ಸಾಧಿಸುವ ಸಲುವಾಗಿ ಎಲೆಕ್ಟ್ರಿಕ್ ಟ್ಯಾಕ್ಸಿ ಯೋಜನೆ ತರಲಾಗಿದೆ.
* ಯೋಜನೆಯಡಿ ಬೆಂಗಳೂರಿನ ಸುತ್ತಮುತ್ತಲ 110 ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.
*ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ 24 ಕಡೆ ಮೇಲ್ಸೇತುವೆಗಳ ನಿರ್ಮಾಣ ಮಾಡುವುದಾಗಿ ಹಾಗೂ 4 ಕಡೆ ಕಲಾಮಂದಿರಗಳನ್ನು ಸ್ಥಾಪಿಸುವುದಾಗಿ ಯಡಿಯೂರಪ್ಪ ಈ ಬಜೆಟ್ನಲ್ಲಿ ಘೋಷಿಸಿದ್ದಾರೆ.