Sun,May19,2024
ಕನ್ನಡ / English

ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಕಲ್ಯಾಣ! | Janata news

05 Mar 2020
737

ಬೆಂಗಳೂರು : ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಜ್ಯೇಷ್ಠ ಪುತ್ರಿ ರಕ್ಷಿತಾ ಮತ್ತು ಹೈದರಾಬಾದ್‌ ಮೂಲದ ರವಿಕುಮಾರ್‌ ಪುತ್ರ ಲಲಿತ್‌ ಸಂಜೀವ್‌ ರೆಡ್ಡಿ ಅವರ ವಿವಾಹ ಗುರುವಾರ ಅದ್ಧೂರಿಯಾಗಿ ಬೆಂಗಳೂರಿನಲ್ಲಿ ನಡೆಯಲಿದೆ. ಮೇಲುಕೋಟೆ ಕಲ್ಯಾಣಿ ಪರಿಕಲ್ಪನೆಯಲ್ಲಿ ಜಗಮಗಿಸುವ ಮಂಟಪ ಸಿದ್ಧಗೊಳಿಸಲಾಗಿದೆ.

ನಗರದ ಅರಮನೆ ಮೈದಾನದಲ್ಲಿ (ವಸಂತನಗರ ಗೇಟ್‌) ನಡೆಯುವ ವಿವಾಹಕ್ಕೆ ಅತಿಥಿಗಳು ಆಗಮಿಸಿದ್ದು, ಬೆಳಗ್ಗೆ 7ರಿಂದ 9 ಗಂಟೆಯೊಳಗಿನ ಶುಭಲಗ್ನದಲ್ಲಿ ರಕ್ಷಿತಾ ಮತ್ತು ಲಲಿತ್‌ ಸಂಜೀವ್‌ ರೆಡ್ಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಬಸವರಾಜಬೊಮ್ಮಾಯಿ, ವಿ.ಸೋಮಣ್ಣ, ಕೆ.ಗೋಪಾಲಯ್ಯ ಸೇರಿದಂತೆ ಮತ್ತಿತರರು ವಧು-ವರರನ್ನು ಆಶೀರ್ವದಿದರು.

ಚಲನಚಿತ್ರ ತಾರೆಯರು, ಉದ್ಯಮಿಗಳು ಸೇರಿದಂತೆ ಇತರೆ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯ ಜನರು ವಿವಾಹ ಮಹೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ. ಮದುವೆಗಾಗಿ 40 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದ್ದು, ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನ ಹಾಗೂ ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯಲ್ಲಿ ನಿರ್ಮಿಸಲಾಗಿದೆ.

40 ಎಕರೆಯಲ್ಲಿ 27 ಎಕರೆ ಮದುವೆ ಸೆಟ್, 4 ಎಕರೆಯಲ್ಲಿ ಮದುವೆ ಕಾರ್ಯ, 15 ಎಕರೆ ಪಾರ್ಕಿಂಗ್ ಮತ್ತು ಆರು ಎಕರೆ ಊಟಕ್ಕಾಗಿ ಸೆಟ್ ನಿರ್ಮಾಣಗೊಂಡಿದೆ. ಮುಹೂರ್ತ ಮಂಟಪದಲ್ಲಿ ನಾಲ್ಕು ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದ್ದು, ಏಳು ಸಾವಿರ ಮಂದಿ ಒಂದೇ ಬಾರಿ ಊಟ ಮಾಡಬಹುದಾಗಿದೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಮದುವೆ ಸಂದರ್ಭದಲ್ಲಿ ಮೇಕಪ್ ಮಾಡಿದವರೇ ರಕ್ಷಿತಾಗೆ ಮೇಕಪ್ ಮಾಡಿದ್ದಾರೆ. ಉದ್ಯಮಿ ಅಂಬಾನಿ ಮಗನ ಮದುವೆ ಫೋಟೋ, ವಿಡಿಯೋ ತೆಗೆದ ಜಯರಾಮನ್ ಪಿಳ್ಳೈ ಜೊತೆ ದಿಲೀಪ್ ಅವರು ಶ್ರೀರಾಮುಲು ಪುತ್ರಿಯ ಮುದುವೆ ಫುಲ್ ವಿಡಿಯೋ ಚಿತ್ರೀಕರಿಸಿದ್ದಾರೆ.

English summary :Minister Sriramulu Daughter Marriage

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...