ಮೈಸೂರಿನಲ್ಲಿ ಕೊಕ್ಕರೆಗಳ ಸಾಮೂಹಿಕ ಸಾವು: ಹೆಚ್ಚಿದ ಆತಂಕ! | Janata news
ಮೈಸೂರು : ಮೈಸೂರಿನ ವಿದ್ಯಾರಣ್ಯಪುರದಲ್ಲಿ ಕೊಕ್ಕರಗಳೂ ಇದ್ದಕ್ಕಿದ್ದಂತೆ ಸಾಮೂಹಿಕವಾಗಿ ಸಾವನ್ನಪ್ಪಿದ್ದು, ಪರಿಣಾಮ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.
ವಿದ್ಯಾರಣ್ಯಪುರಂನ 5ನೇ ಮುಖ್ಯ ರಸ್ತೆಯಲ್ಲಿ ಈ ವರೆಗೂ ಕಳೆದ 1 ವಾರದಿಂದ 12ಕ್ಕೂ ಹೆಚ್ಚು ಕೊಕ್ಕರೆಗಳು ಸಾವನ್ನಪ್ಪಿದ್ದು, ಸಾವಿಗೆ ಕಾರಣಗಳು ತಿಳಿದುಬಂದಿಲ್ಲ.
ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಈ ಕೊಕ್ಕರೆಗಳ ಸಾವು ಮೈಸೂರಿಗರಲ್ಲಿ ತಲ್ಲಣ ಉಂಟು ಮಾಡಿದೆ. ವಾರ್ಡ್ ಸಂಖ್ಯೆ 55ರ ವ್ಯಾಪ್ತಿಯಲ್ಲೇ 12 ಕೊಕ್ಕರೆಗಳು ಅಸುನೀಗಿವೆ. ಹಕ್ಕಿ ಜ್ವರದಿಂದಲೇ ಕೊಕ್ಕರೆಗಳು ಮೃತಪಟ್ಟಿರಬಹುದು ಎಂಬ ಶಂಕೆ ಮೂಡಿದೆ. ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಕೊಕ್ಕರೆಗಳ ದೇಹದ ತುಣುಕುಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಕೊಕ್ಕರೆಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವಿರಬಹುದು ಎಂದು ವಾರ್ಡ್ ನಂಬರ್ 55 ರ ಪಾಲಿಕೆ ಸದಸ್ಯ ಮಾ. ವಿ. ರಾಮಪ್ರಸಾದ್ ಶಂಕೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ವಿಶ್ವವಿಖ್ಯಾತ ಮೃಗಾಲಯವಿದ್ದು, ಇತರೆ ಪ್ರಾಣಿ, ಪಕ್ಷಿಗಳಿಗೆ ಈ ಕೊಕ್ಕರೆಗಳಿಗೆ ತಗುಲಿರುವ ಸೋಂಕು ಮೃಗಾಲಯದ ಪಕ್ಷಿಗಳಿಗೂ ತಗುಲದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಪಶುವೈದ್ಯರು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.