ನಿಶ್ಚಿತಾರ್ಥದಲ್ಲಿ ಊಟ ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ! | Janata news
ಬೀದರ್ : ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ನಂತರ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಸ್ತಾಪುರ ಗ್ರಾಮದ ಮಾರುತಿ ಪಾಟೀಲ ಎಂಬುವರ ಮಗಳನ್ನು ನಾರಾಯಣಪುರ ಗ್ರಾಮದ ಯುವಕನೊಂದಿಗೆ ಇಂದು ನಿಶ್ಚಿತಾರ್ಥ ನಡೆಸಲಾಗುತ್ತಿತ್ತು ಕಾರ್ಯಕ್ರಮ ನಿಮಿತ್ತ ಮಧ್ಯಾಹ್ನ ಸುಮಾರು 2 ಗಂಟೆಗೆ ಊಟ ಮಾಡಿದ ಜನರಿಗೆ ವಾಂತಿ ಭೇದಿ ಶುರುವಾಗಿದ್ದು, ವಾಂತಿ ಭೇದಿಯಿಂದ ಜನರ ಅಸ್ವಸ್ಥರಾಗಿದ್ದಾರೆ.
ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಾದ ಪಾಟೀಲ್ ಆಸ್ಪತ್ರೆ, ರಿಫಾ ಆಸ್ಪತ್ರೆ, ಬಿರಾದಾರ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಮಾರು 600ರಷ್ಟು ಜನ ಊಟ ಮಾಡಿದ್ದು, ಇದರಲ್ಲಿ ಸುಮಾರು 200ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ ಶುರುವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.