ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಹಂತಕರ ಶತಪ್ರಯತ್ನ, ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ! | Janata news
ನವದೆಹಲಿ: : 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ನೇಣು ಕುಣಿಕೆಯಿಂದ ಪಾರಾಗಲೇಬೇಕು ಎಂದು ಪ್ರಯತ್ನಿಸುತ್ತಿರುವ ಅಪರಾಧಿಗಳು ಈಗ ಅಂತರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಕೋರ್ಟ್ನಲ್ಲಿ ಕ್ಯುರೇಟಿವ್ ಅರ್ಜಿಗಳನ್ನು ಸಲ್ಲಿಸುವುದು, ರಾಷ್ಟ್ರಪತಿಗಳಿಗೆ ಕ್ಷಮಾಪಣಾ ಅರ್ಜಿ ಸಲ್ಲಿಸುವುದು, ಕ್ಷಮಾಪಣಾ ಅರ್ಜಿ ಸಲ್ಲಿಸುವುದು ತಿರಸ್ಕಾರಕ್ಕೊಳಗಾದರೆ ಮತ್ತೆ ಅರ್ಜಿ ಸಲ್ಲಿಸುವುದು ಹೀಗೆ ನಾಲ್ಕೂ ಅಪರಾಧಿಗಳ ಶತಪ್ರಯತ್ನ ನಡೆಯುತ್ತಲೇ ಇದೆ.
ಮಾರ್ಚ್ 20ರಂದು ನಿಗದಿಯಾಗಿರುವ ಗಲ್ಲುಶಿಕ್ಷೆಗೆ ತಡೆ ನೀಡಬೇಕೆಂದು ಮೂವರು ಅಪರಾಧಿಗಳು ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿದ್ದಾರೆ.
2012 Delhi gang rape case: Three convicts have approached the International Court of Justice (ICJ) seeking stay on the execution of their death sentence. The three convicts who approached the ICJ are Akshay, Pawan and Vinay. pic.twitter.com/i4kxdjTMcY
— ANI (@ANI) March 16, 2020