ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ: ಸಾಕಿರುವ ಎಲ್ಲಾ ಹಕ್ಕಿಗಳನ್ನು ಕೊಲ್ಲಲು ಆದೇಶ! | Janata news
ಮೈಸೂರು : ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಸಾಕಿರುವ ಕೋಳಿ ಮತ್ತು ಕೊಕ್ಕರೆಯ ಸ್ಯಾಂಪಲ್ನಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೈಸೂರಿನಲ್ಲಿ ಕೋಳಿಗಳ ಮಾರಾಟವನ್ನು ನಿಷೇಧಿಸಲಾಗಿದೆ.
ಮೈಸೂರು ನಗರ ವ್ಯಾಪ್ತಿಯಲ್ಲಿ ಕೋಳಿಗಳ ಮಾರಾಟವನ್ನು ಬಂದ್ ಮಾಡಲಾಗಿದೆ. ಕುಂಬಾರಕೊಪ್ಪಲು ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಕೋಳಿ ಮಾರಾಟ ಬಂದ್ ಆಗಿದೆ. ಕುಂಬಾರಕೊಪ್ಪಲು ಸುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಕೋಳಿಗಳನ್ನು ತಿನ್ನುವಂತಿಲ್ಲ.
ಮನೆಯಲ್ಲಿ ಸಾಕಿರುವ ಎಲ್ಲಾ ರೀತಿಯ ಹಕ್ಕಿಗಳನ್ನೂ ಕೊಲ್ಲಲು ಜಿಲ್ಲಾಡಳಿತ ಆದೇಶಿಸಿದೆ. ಪಕ್ಷಿಗಳನ್ನು ಸಂರಕ್ಷಿಸಿದರೆ ಕೂಂಬಿಂಗ್ ಕಾರ್ಯಚರಣೆ ಮಾಡಿ ಆ ಪಕ್ಷಿಗಳನ್ನು ಸಾಯಿಸಲಾಗುತ್ತದೆ. ಇದು ಪಕ್ಷಿಗಳಿಂದ ಪಕ್ಷಿಗಳಿಗೆ ಹರಡುವ ಜ್ವರ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸೂಚನೆ ನೀಡಲಾಗಿದೆ.