ಗಲ್ಲಿಗೇರಿದವನ ಹೆಂಡತಿ ಎಂಬ ಹಣೆಪಟ್ಟಿ ಬೇಡ, ವಿಚ್ಛೇದನ ನೀಡಿ.. ಆ ಮೇಲೆ ಗಲ್ಲಿಗೇರಿಸಿ: ನಿರ್ಭಯಾ ಅತ್ಯಾಚಾರಿಯ ಪತ್ನಿ | Janata news
ಬೆಂಗಳೂರು : ಅಪರಾಧಿ ಅಕ್ಷಯ್ ಠಾಕೂರ್ ಪತ್ನಿ ವಿಚ್ಛೇಧನ ನೀಡದ ಹೊರತು ಗಲ್ಲು ಶಿಕ್ಷೆ ಜಾರಿ ಮಾಡಬಾರದು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
2012ರ ದೆಹಲಿಯ ನಿರ್ಭಯಾ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇದೇ ಮಾರ್ಚ್ 20ರಂದು ಬೆಳಿಗ್ಗೆ 5.30ಕ್ಕೆ ನೇಣಿಗೇರಿಸುವಂತೆ ಎಂದು ದೆಹಲಿ ನ್ಯಾಯಲಯ ಡೆತ್ ವಾರೆಂಟ್ ಜಾರಿಗೊಳಿಸಿದೆ. ಅಪರಾಧಿಗಳಾದ ಮುಖೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ ಠಾಕೂರ್ (31) ಅವರನ್ನು ಮಾರ್ಚ್ 20ರಂದು ನೇಣಿಗೇರಿಸಲು ನ್ಯಾಯಾಲಯ ಆದೇಶಿಸಿದೆ.
ಔರಂಗಾಬಾದ್ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್ ಕೋರಿರುವ ಪುನೀತಾ ತನ್ನ ಗಂಡನ ಕೃತ್ಯದ ನೆರಳಿನಿಂದ ಹೊರಬರಲು ತನಗೆ ಸಾಧ್ಯವಾಗುತ್ತಿಲ್ಲ. ನಾನು ವಿಧವೆಯಾಗಿ ಬದುಕಲು ಬಯಸುವುದಿಲ್ಲ. ಆದ್ದರಿಂದ ನೇಣು ಹಾಕುವ ಮೊದಲು ನಾವು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯುತ್ತೇನೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾಳೆ ಎನ್ನಲಾಗಿದೆ.