ಹೊರಗಡೆ ಬರಬೇಡಿ, ಮನೆಯಿಂದ ಹೊರಬರದಿರಿ: ಜನರಲ್ಲಿ ಕೇಂದ್ರ ಮನವಿ | Janata news
ನವದೆಹಲಿ: : ಕರೊನಾ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರೀ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ, ಮಾ.22ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿ ಆದೇಶ ನೀಡಿದೆ.
ಮಾರ್ಚ್ 22 ರಿಂದ ಒಂದು ವಾರ ಯಾವುದೇ ಅಂತಾರಾಷ್ಟ್ರೀಯ ಕಂಪನಿಯ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡುವುದಿಲ್ಲ ತಿಳಿಸಿದೆ.
ಇನ್ನು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. 65 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರುವಂತಿಲ್ಲ. ಹಾಗೂ ಖಾಸಗಿ ಕಂಪನಿಗಳ ನೌಕರರಿಗೆ ವರ್ಕ್ ಫ್ರಂ ಹೋಮ್ಗೆ ಸೂಚನೆ ನೀಡಿ ಸರ್ಕಾರ ಮಾರ್ಗ ಸೂಚಿಯಲ್ಲಿ ತಿಳಿಸಿದೆ.
ಇದೇ ವೇಳೆ ವರ್ಕ್ ಫ್ರಮ್ ಹೋಮ್ ಅವಕಾಶವನ್ನು ಮುಂದುವರೆಸುವಂತೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ಆದೇಶ ನೀಡಿರುವ ಕೇಂದ್ರ ಸರ್ಕಾರ, ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳು, ದಿವ್ಯಾಂಗರು ಹಾಗೂ ರೋಗಿಗಳಿಗೆ ಮಾತ್ರ ತುರ್ತು ಅಗತ್ಯತೆಗೆ ತಕ್ಕಂತೆ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರ ಹೇಳಿದೆ.
ಇಂದು ಸಂಜೆ 8ಗಂಟೆಗೆ ಕರೊನಾ ವೈರಸ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಡೀ ಭಾರತ ಲಾಕ್ ಡೌನ್ (ಸಂಪೂರ್ಣ ಬಂದ್) ಆಗುವುದನ್ನು ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಘೋಷಿಸಲಿದ್ದಾರೆ ಎಂಬಂತಹ ಮಾತುಗಳೂ ಕೇಳಿಬರುತ್ತಿವೆ.
Government of India: No scheduled international commercial passenger flights shall be allowed to land in India from March 22 for one week. #coronavirus pic.twitter.com/cr7txySAhJ
— ANI (@ANI) March 19, 2020